ಜೆ.ಡಿ.ಎಸ್. ರಾಜ್ಯಾಧ್ಯಕ್ಷರನ್ನಾಗಿ ಹೆಚ್.ಡಿ. ಕುಮಾರಸ್ವಾಮಿ ಸರ್ವಾನುಮತದ ಆಯ್ಕೆ
1 min readಚಿಕ್ಕಮಗಳೂರು : ಜೆ.ಡಿ.ಎಸ್. ಪಕ್ಷದ ರಾಜ್ಯಾಧ್ಯಕ್ಷರಾನ್ನಾಗಿ ಹೆಚ್.ಡಿ. ಕುಮಾರಸ್ವಾಮಿಯವರನ್ನು ಸರ್ವಾನುಮತದಿಂದ ಆಯ್ಕೆ ಮಾಡಿದ್ದು, ರಾಷ್ಟ್ರೀಯ ಪಕ್ಷವಾದ ಬಿಜೆಪಿ ಪಕ್ಷದ ಜೊತೆಗಿನ ಮೈತ್ರಿಯನ್ನು ಸರ್ವಾನುಮತದಿಂದ ಜೆಡಿಎಸ್ ಪಕ್ಷದ ಕಾರ್ಯಕಾರಿ ಸಮಿತಿಯಲ್ಲಿ ಒಪ್ಪಿ ಅಂಗಿಕರಿಸಲಾಗಿದೆ ಎಂದು ಜೆಡಿಎಸ್ ಪಕ್ಷದ ರಾಜ್ಯ ಉಪಾಧ್ಯಕ್ಷರಾದ ಸುಧಾಕರ್ ಶೆಟ್ಟಿ ಸ್ಪಷ್ಟನೆ ನೀಡಿದರು.
ಜೆಡಿಎಸ್ ಮಾಜಿ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂರವರ ಗೊಂದಲದ ಹೇಳಿಕೆಗೆ ತೆರೆ ಎಳೆಯುವ ಹಿನ್ನೆಲೆ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ ಅವರು ಬಿಜೆಪಿ ಜೊತೆಗಿನ ಮೈತ್ರಿಯ ಕುರಿತು ಸಿ.ಎಂ. ಇಬ್ರಾಹಿಂರವರ ಅಧ್ಯಕ್ಷತೆಯಲ್ಲಿ ನಡೆದ ಸಮಲೋಚನಾ ಸಭೆಯಲ್ಲಿ ಅವರೆ ಕಾಂಗ್ರೆಸ್ ಪಕ್ಷದಿಂದ ಜೆಡಿಎಸ್ ಪಕ್ಷದ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ನಡೆಯುತ್ತಿದ್ದು, ಮೈತ್ರಿಯ ಅವಶ್ಯಕತೆ ಇದೆ ಎಂದು ಅವರೇ ಹೇಳಿದ್ದು, ಎಲ್ಲರೂ ಸರ್ವಾನುಮತದಿಂದ ಒಪ್ಪಿದರು. ಮೈತ್ರಿಯ ನಂತರ ಸಿ.ಎಂ. ಇಬ್ರಾಹಿಂ ವಿರೋಧದ ಹೇಳಿಕೆ ನೀಡುತ್ತಿರುವುದರಿಂದ, ರಾಜ್ಯ ಕಾರ್ಯಕಾರಿಣಿ ಸಭೆ ನಡೆಸಿ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರನ್ನು ಸರ್ವಾನುಮತದಿಂದ ಲೋಕಾರ್ಪಣೆ ಮಾಡಲಾಯಿತು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g