May 20, 2024

MALNAD TV

HEART OF COFFEE CITY

ಜೂ.10 ಬೆಂಗಳೂರಿನಲ್ಲಿ ಕರವೆಯಿಂದ ಬೃಹತ್ ರಕ್ತದಾನ ಶಿಬಿರ: ಜಗದೀಶ್

1 min read

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡರ 57ನೇ ಜನ್ಮದಿನಾಚರಣೆ ಅಂಗವಾಗಿ ಜೂ.10 ರಂದು ಶನಿವಾರ ಬೃಹತ್ ರಕ್ತದಾನ ಶಿಬಿರವನ್ನು ಬೆಂಗಳೂರಿನ ಗಾಯಿತ್ರಿ ವಿಹಾರ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ವೇದಿಕೆ ಜಿಲ್ಲಾಧ್ಯಕ್ಷ ತೇಗೂರು ಜಗದೀಶ್ ತಿಳಿಸಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಕಳೆದ 25ವರ್ಷಗಳಿಂದ ಕನ್ನಡ ನಾಡು ನುಡಿ ನೆಲ ಜಲ ಭಾಷೆ ಸಂಸ್ಕøತಿ ರೈತ ಕಾರ್ಮಿಕ ಮಹಿಳೆ ವಿದ್ಯಾರ್ಥಿ ಯುವಜನರ ಅಭಿವೃದ್ಧಿಗಾಗಿ ಹೋರಾಟ ಮಾಡಲಾಗಿದೆ ಎಂದು ಹೇಳಿದರು.
2008 ಇಸವಿಯಲ್ಲಿ ರಕ್ತದಾನ ಮಾಡಿದ್ದು ಒಂದೇ ದಿನ ಏಕಕಾಲದಲ್ಲಿ ರಾಜ್ಯಾದ್ಯಂತ 8 ಸಾವಿರ ಕಾರ್ಯಕರ್ತರು ರಕ್ತದಾನವನ್ನು ಮಾಡಿರುವುದು ಒಂದು ದೊಡ್ಡ ದಾಖಲೆಯಾಗಿದೆ. ಅದರಂತೆ ಈಗಾಗಲೆ ಕೋರೋನ ಎಂಬ ರೋಗದಿಂದ ರಾಜ್ಯದಲ್ಲೂ ಸಹ ಸಾವಿರಾರು ಜನರು ಮೃತರಾಗಿದ್ದು ಲಕ್ಷಾಂತರ ಜನರು ಅನಾರೋಗ್ಯದಿಂದ ಬಳಲುತ್ತಿದ್ದು ಮತ್ತು ಇತರೆ ಅಪಘಾತದಲ್ಲಿ ಹಾಗೂ ಬೇರೆ ಬೇರೆ ಖಾಯಿಲೆಯಿಂದ ನರಳುತ್ತಿರುವ ರೋಗಿಗಳಿಗೆ ರಕ್ತದ ಅವಶ್ಯಕತೆ ಇರುವುದನ್ನು ಮನಗಂಡು ರಕ್ಷಣಾ ವೇದಿಕೆಯ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದ ಗಾಯಿತ್ರಿ ವಿಹಾರದಲ್ಲಿ ಸಹ ಕರವೇ ಸುಮಾರು 10000 ರಕ್ತದಾನವನ್ನು ಮಾಡುತಿದ್ದೇವೆ ಎಂದರು.
ಚಿಕ್ಕಮಗಳೂರು ಜಿಲ್ಲಾ ಘಟಕದ ವತಿಯಿಂದಲೂ ಕೂಡ ರಕ್ತದಾನ ಮಾಡಲು ಸುಮಾರು 500 ಕಾರ್ಯಕರ್ತರು ಭಾಗವಹಿಸುತಿದ್ದು ಎಲ್ಲಾ ತಾಲ್ಲೂಕಿನ ಅಧ್ಯಕ್ಷರು, ಮಹಿಳಾ ಘಟಕದ ಅಧ್ಯಕ್ಷರುಗಳು ಹಾಗೂ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು, ಯುವ ಘಟಕದ ಪದಾಧಿಕಾರಿಗಳು ರಕ್ತದಾನ ಮಾಡಿ ನಾರಾಯಣ ಗೌಡರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಲಿರುವುದಾಗಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ವೇದಿಕೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೋಟೆ ಸೋಮಣ್ಣ, ಮುಖಂಡರುಗಳಾದ ನಾಗರತ್ನ, ಪೂರ್ಣಿಮ, ಇರ್ಷಾದ್ ಅಹಮದ್, ಪಂಚಾಕ್ಷರಿ ಇದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!