May 3, 2024

MALNAD TV

HEART OF COFFEE CITY

ಸಾರಿಗೆ ನೌಕರರ ಮಣಿಸಲು ವರ್ಗಾವಣೆ ಅಸ್ತ್ರ ಪ್ರಯೋಗಿಸಿದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ : ಕಣ್ಣಿರಿಟ್ಟ ಜಿಲ್ಲಾಧ್ಯಕ್ಷ

1 min read

ಚಿಕ್ಕಮಗಳೂರು : ಕೆ.ಎಸ್.ಆರ್.ಟಿ.ಸಿ ಸಂಸ್ಥೆಯ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು, 6 ನೇ ವೇತನ ಆಯೋಗವನ್ನು ಜಾರಿಗೊಳಿಸಬೇಕೆಂಬ ಬೇಡಿಕೆ ಸೇರಿದಂತೆ ಇನ್ನೂ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಡೆಸುತ್ತಿರುವ ಅನಿರ್ದಿಷ್ಠಾವಧಿ ಮುಷ್ಕರ 4 ನೇ ದಿನಕ್ಕೆ ಕಾಲಿಟ್ಟಿದೆ.

ರಾಜ್ಯಾಧ್ಯಂತ ಕರೆ ನೀಡಿರುವ ಮುಷ್ಕರಕ್ಕೆ ಬೆಂಬಲವಾಗಿ ಚಿಕ್ಕಮಗಳೂರು ಕೆ.ಎಸ್.ಆರ್.ಟಿ.ಸಿ ವಿಭಾಗದ ನೌಕರರು ನಗರ ಗಾಂಧಿ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹಠ ಬಿಡದೆ ಪ್ರತಿಭಟನೆ ನಡೆಸುತ್ತಿರುವ ನೌಕರರ ಮುಷ್ಕರವನ್ನು ಹತ್ತಿಕ್ಕಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ವರ್ಗಾವಣೆ ತಂತ್ರವನ್ನು ಅನುಸರಿಸಿದೆ. ಸಾರ್ವಜನಿಕರ ಹಿತ ದೃಷ್ಠಿಯಿಂದ ಹಾಗೂ ಆಡಳಿತಾತ್ಮಕ ಕಾರಣಗಳ ಮೇರೆಗೆ ಈ ಕೂಡಲೇ ಜಾರಿಯಾಗುವಂತೆ ವರ್ಗಾವಣೆ ಆದೇಶ ನೀಡಿದ್ದೇವೆ ಎಂದು ಸರ್ಕಾರದ ಆದೇಶದ ಪ್ರತಿಯಲ್ಲಿ ತಿಳಿಸಲಾಗಿದೆ. ಚಿಕ್ಕಮಗಳೂರು ವಿಭಾಗದ 25 ನೌಕರರು ವರ್ಗಾವಣೆ ಸೇರಿಂದತೆ ಕೆ.ಎಸ್.ಆರ್.ಟಿ.ಸಿ ಸಂಸ್ಥೆಯ ನೌಕರರ ಕೂಟದ ಜಿಲ್ಲಾಧ್ಯಕ್ಷ ಸದಾಶಿವ ಮಂಚಲ್ಕರ್ ಸೇರಿದಂತೆ 22 ಜನರನ್ನು ಚಿಕ್ಕಮಗಳೂರು ವಿಭಾಗದಿಂದ ಪುತ್ತೂರು ವಿಭಾಗಕ್ಕೆ ವರ್ಗಾವಣೆ ಮಾಡುವ ಮೂಲಕ ಬೆದರಿಸುವ ತಂತ್ರ ಅನುಸರಿಸಿದೆ.

 

ಪ್ರತಿಭಟನೆಯ ನೇತೃತ್ವ ವಹಿಸಿಕೊಂಡಿರುವ  ಕೆ.ಎಸ್.ಆರ್.ಟಿ.ಸಿ ಸಂಸ್ಥೆಯ ನೌಕರರ ಕೂಟದ ಜಿಲ್ಲಾಧ್ಯಕ್ಷ ಸದಾಶಿವ ಮಂಚಲ್ಕರ್ ಈ ಸುದ್ದಿಯಿಂದ ವಿಚಲಿತರಾಗದೆ, ಭಾವಪರವಶರಾಗಿ ಕಣ್ಣಿರಿಟ್ಟು, ನನ್ನನ್ನೂ ಪುತ್ತೂರಿಗೆ ವರ್ಗಾವಣೆ ಮಾಡಿದ್ದಾರೆ, ಆದರೆ ನನ್ನ ತಲೆ ಕೊಟ್ಟಾದ್ರೂ ನಿಮ್ಮ ತಲೆ ಉಳಿಸುತ್ತೇನೆ ಎಂದು ಹೇಳಿದರು. ಇವರ ಮಾತನ್ನು ಕೇಳಿ ಪ್ರತಿಭಟನಾ ನಿರತ ಮಹಿಳೆಯರು ಕಣ್ಣಿರಿಟ್ಟರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!