May 15, 2024

MALNAD TV

HEART OF COFFEE CITY

ಅಂತೂ-ಇಂತೂ ಸೆರೆಯಾದ ನರಹಂತಕ ಕಾಡಾನೆ ಮೂಡಿಗೆರೆ ಭೈರ…!

1 min read

 

ಚಿಕ್ಕಮಗಳೂರು : ಕಳೆದ ನಾಲ್ಕೈದು ತಿಂಗಳಿಂದ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಅರಣ್ಯ ಅಧಿಕಾರಿಗಳು ಹಾಗೂ ಜನರ ನಿದ್ದೆಗೆಡಿಸಿದ್ದ ಒಂಟಿಸಲಗ, ನರಹಂತಕ ಕಾಡಾನೆ ಮೂಡಿಗೆರೆ ಭೈರನನ್ನ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ನಾಲ್ಕೈದು ತಿಂಗಳಿಂದ ತಾಲೂಕಿನಾದ್ಯಂತ ದಾಂಧಲೆ ನಡೆಸಿಕೊಂಡು ಇಬ್ಬರು ಜೀವ ತೆಗೆದಿದ್ದ ಭೈರನಿಂದ ಜನ ರೋಸಿ ಹೋಗಿದ್ದರು. ಅರಣ್ಯ ಇಲಾಖೆ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದರು.

ಆನೆ ಹಾವಳಿಯಿಂದ ತಿಂಗಳಿಗೊಂದು ಹೆಣ ಬೀಳ್ತಿದ್ರಿಂದ ಕಂಗೆಟ್ಟಿದ್ದ ಜನ ಶಾಸಕರ ಮೇಲೂ ಹಲ್ಲೆಗೆ ಮುಂದಾಗಿದ್ದರು. ಮಲೆನಾಡಲ್ಲಿ ತೀವ್ರ ದಾಂಧಲೆ ನಡೆಸುತ್ತಿದ್ದ ಮೂರು ಕಾಡಾನೆಗಳನ್ನ ಹಿಡಿಯಲು ಸರ್ಕಾರ ಕೂಡ ಅನುಮತಿ ನೀಡಿತ್ತು. ಅದರಂತೆ, ಆದರೆ, ಕಳೆದ ಎಂಟತ್ತು ದಿನಗಳಿಂದ ಆರು ಸಾಕಾನೆಗಳೊಂದಿಗೆ ಮೂರು ಕಾಡಾನೆಗಳನ್ನ ಹಿಡಿಯಲು ಅಧಿಕಾರಿಗಳು-ಸ್ಥಳಿಯರು ಹಗಲಿರುಳು ಕಷ್ಟ ಪಟ್ಟಿದ್ದರು. ಎರಡು ಕಾಡಾನೆಗಳನ್ನ ಸೆರೆ ಹಿಡಿದಿದ್ರು. ಆದರೆ, ಪುಂಡ ಒಂಟಿಸಲಗ ಎಲ್ಲರ ಕಣ್ತಪ್ಪಿಸಿ ನಾಪತ್ತೆಯಾಗುತ್ತಿದ್ದ. ಅರಣ್ಯ ಅಧಿಕಾರಿಗಳ ಡ್ರೋನ್ ಕ್ಯಾಮರಕ್ಕೂ ಕಣ್ತಪ್ಪಿಸಿ ಎಸ್ಕೇಪ್ ಆಗಿ ಓಡಾಡ್ತಿದ್ದ. ಇಂದು ಮಧ್ಯಾಹ್ನ ಮೂಡಿಗೆರೆ ತಾಲೂಕಿನ ಊರಬಗೆ ಗ್ರಾಮದಲ್ಲಿ ಭೈರ ಇರುವ ಖಚಿತ ಮಾಹಿತಿ ಪಡೆದ ಅಧಿಕಾರಿಗಳು ನಿರಂತರ ಕಾರ್ಯಾಚರಣೆ ನಡೆಸಿ ಅಂತೂ-ಇಂತೂ ಭೈರನನ್ನ ಖೆಡ್ಡಾಕೆ ಬೀಳಿಸಿದ್ದಾರೆ. ನರಹಂತಕನಾಗಿ ಜನರ ನಿದ್ದೆಗೆಡಿಸಿದ್ದ ಮೂಡಿಗೆರೆ ಭೈರ ಸೆರೆಯಾದ ಕಾರಣ ಜನರ ಜೊತೆ ಅರಣ್ಯ ಇಲಾಖೆ ಅಧಿಕಾರಿಗಳು ಕೂಡ ನಿಟ್ಟುಸಿರು ಬಿಟ್ಟಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!