ಲಂಚ ಪಡೆಯುವಾಗ ಕಡೂರು ಬಿಇಓ ಲೋಕಾಯುಕ್ತ ಬಲೆಗೆ…!
1 min readಚಿಕ್ಕಮಗಳೂರು : ಶಿಕ್ಷಕನನ್ನ ಬೇರೆ ಶಾಲೆಗೆ ನಿಯೋಜನೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಬಿಇಓ ಕೆ.ಎನ್.ರಾಜಣ್ಣ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಡೂರು ತಾಲೂಕಿನ ಶಿಕ್ಷಕ ರಾಜಪ್ಪ ಅವರನ್ನು ಬೇರೆ ಶಾಲೆಗೆ ನಿಯೋಜನೆ ಮಾಡಲು 15,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇಂದು ಕಡೂರು ತಾಲೂಕಿನ ಜಿ.ತಿಮ್ಮಾಪುರ ಗೇಟ್ ಬಳಿ ಲಂಚದ ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ತಿರುಮಲೇಶ್ ನೇತೃತ್ವದಲ್ಲಿ ದಾಳಿ ಮಾಡಿದ್ದಾರೆ. ಕಡೂರು ತಾಲೂಕಿನ ಜಿ ತಿಮ್ಮಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿಯೋಜನೆ ಮೇರೆಗೆ ಕರ್ತವ್ಯದಲ್ಲಿದ್ದ ಶಿಕ್ಷಕ ರಾಜಪ್ಪ ಅವರನ್ನ ಗರ್ಜೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನಿಯೋಜನೆ ಮಾಡಲು ಬಿಇಓ 15000 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ತಿಳಿದುಬಂದಿದೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g