ಸತತ ಮಳೆಯಿಂದ ಮೈದುಂಬಿ ಹರಿಯುತ್ತಿರುವ ಕಲ್ಲತ್ತಿಗಿರಿ ಜಲಪಾತ
1 min readತರೀಕೆರೆ : ಮಲೆನಾಡಿನಲ್ಲಿ ಸತತವಾಗಿ ಸುರಿಯುತ್ತಿರುವ ಧಾರಕಾರ ಮಳೆಯಿಂದ ಮಲೆನಾಡ ಭಾಗದ ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಇದರಿಂದ ಜಿಲ್ಲಾಧ್ಯಂತ ಇರುವ ಜಲಪಾತಗಳು ಮೈದುಂಬಿ ರುದ್ರ ರಮಣೀಯವಾಗಿ ನೋಡುಗರ ಎದೆಯನ್ನು ಝಲ್ಲೆನಿಸುತ್ತಿದೆ.
ಮುಳ್ಳಯ್ಯನಗಿರಿ ತಪ್ಪಲ್ಲಿನಲ್ಲಿ ಸತತವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತರೀಕೆರೆ ತಾಲೂಕಿನ ಕಲ್ಲತ್ತಿ ಗಿರಿ ಜಲಪಾತ ಮೈದುಂಬಿ ಹರಿಯುತ್ತಿದೆ. ಕಲತ್ತಿಗಿರಿ ಜಲಪಾತದ ಪಕ್ಕದಲ್ಲಿರುವ ಶ್ರೀ ವೀರಭದ್ರೇಶ್ವರ ದೇವಾಲಯಕ್ಕೆ ಹೋಗುವ ಮಾರ್ಗ ನೀರಿನಿಂದ ಮುಚ್ಚಿ ಹೋಗಿದೆ. ಕಲ್ಲಿತ್ತಿಗಿರಿ ಜಲಪಾತ ಮೈದುಂಬಿ ಹರಿಯುತ್ತಿರುವುದರಿಂದ ರುದ್ರ ರಮಣೀಯವಾಗಿದೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g