ನಿರಂತರ ಮಳೆಯಿಂದ ಜೀವಕಳೆ ಪಡೆದುಕೊಂಡ ಕಲ್ಲತ್ತಿಗಿರಿ ಜಲಪಾತ
1 min read
ಚಿಕ್ಕಮಗಳೂರು : ಕಳೆದ ಎರಡು ದಿನದಿಂದ ನಿರಂತರವಾಗಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಸುರಿಯುತ್ತಿದ್ದು ಧಾರಾಕಾರ ಮಳೆಯಿಂದ ಕಲ್ಲತ್ತಿಗಿರಿ ಜಲಪಾತ ಮೈದುಂಬಿ ಹರಿಯುತ್ತಿದೆ. ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ಹಾಗೂ ಚಂದ್ರದ್ರೋಣ ಪರ್ವತದ ಸಾಲಿನಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆ ತರೀಕೆರೆ ತಾಲೂಕಿನ ಕಲ್ಲತ್ತಿಗಿರಿ ಜಲಪಾತದ ಸೊಬಗು ಮತ್ತಷ್ಟು ಹೆಚ್ಚಾಗಿದೆ. ಮುಂಗಾರು ಮಳೆ ಆರಂಭವಾದಾಗಿನಿಂದಲೂ ಮಳೆಯ ಕೊರತೆಯಿಂದಾಗಿ ಸಂಪೂರ್ಣ ಬತ್ತುವ ಹಂತ ತಲುಪಿತ್ತು. ಇದೀಗ ಧಾರಾಕಾರ ಮಳೆಯಿಂದಾಗಿ ಕಲ್ಲತ್ತಿಗಿರಿ ಜಲಪಾತಕ್ಕೆ ಜೀವ ಕಳೆ ಬಂದಿದ್ದು ಪ್ರವಾಸಿಗರನ್ನ ಕೈ ಬೀಸಿ ಕರೆಯುತ್ತಿದೆ. ಹಾಲ್ನೊರೆಯಂತೆ ಉಕ್ಕಿ ಹರಿಯುತ್ತಿರುವ ಜಲಪಾತ ಸೊಬಗು ಪ್ರವಾಸಿಗರ ಮನಸ್ಸಿಗೆ ಖುಷಿ ನೀಡುತ್ತಿದ್ದು ಕಲ್ಲತ್ತಿಗಿರಿ ಜಲಪಾತಕ್ಕೆ ಪ್ರವಾಸಿಗರು ಭೇಟಿ ನೀಡಿ ಖುಷಿ ಪಡುತ್ತಿದ್ದಾರೆ..
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g