ಡಿ.31 ರ ಬಂದ್ ಗೆ ಕನ್ನಡ ಸೇನೆ ಬೆಂಬಲ
1 min readಬೆಳಗಾವಿ ಹಾಗೂ ರಾಜ್ಯದ ಗಡಿಭಾಗದಲ್ಲಿ ಎಂಇಎಸ್ ಹಾಗೂ ಶಿವಸೇನೆ ಪುಂಡಾಟಿಕೆ ವಿರೋಧಿಸಿ ಎರಡೂ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಒತ್ತಾಯಿಸಿ ವಿವಿಧ ಕನ್ನಡಪರ ಸಂಘಟನೆಗಳು ಡಿ.31 ರಂದು ಕರೆ ನೀಡಿರುವ ಬಂದ್ ಗೆ ಬೆಂಬಲ ಸೂಚಿಸಿ ಜಿಲ್ಲೆಯಲ್ಲಿಯೂ ಸಹ ಬಂದ್ ಮಾಡುವುದಾಗಿ ಕನ್ನಡ ಸೇನೆ ಜಿಲ್ಲಾಧ್ಯಕ್ಷ ರಾಜೇಗೌಡ ತಿಳಿಸಿದರು.
ಈ ಕುರಿತು ನಗರದ ಪ್ರೆಸ್ ಕ್ಲಬ್ ನಲ್ಲಿ ವಿವಿಧ ಸಂಘಟನೆಗಳ ಮುಖಂಡರ ನೇತೃತ್ವದಲ್ಲಿ ಪತ್ರಿಕಾಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು ರಾಜ್ಯ ನಾಯಕರು ಈಗಾಗಲೇ ಬಂದ್ ಬಗ್ಗೆ ನಿರ್ಧಾರ ಕೈಗೊಂಡಿದ್ದು ಅವರು ನಿಗಧಿಪಡಿಸಿದ ದಿನಾಂಕದಂದು ಬಂದ್ ನಡೆಸುವುದಾಗಿ ತಿಳಿಸಿದರು. ಇನ್ನು ಈಗಾಗಲೇ ಲಾರಿ ಮಾಲೀಕರ ಸಂಘ, ಆಟೋ ಮಾಲೀಕರು,ಚಾಲಕರ ಸಂಘ, ಸೇರಿದಂತೆ ವ್ಯಾಪಾರಸ್ಥರು ಸೇರಿದಂತೆ ಹಲವರ ಬಳಿ ಬಂದ್ ಬಗ್ಗೆ ಚರ್ಚಿಸಲಾಗಿದೆ ಎಂದು ತಿಳಿಸಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g