April 29, 2024

MALNAD TV

HEART OF COFFEE CITY

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಭೂ ಹಕ್ಕುದಾರರ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆ

1 min read

ಕಡೂರು : ಬಗರ್ ಹುಕ್ಕುಂ ಹಾಗೂ ಅರಣ್ಯ ಹಕ್ಕಿನ ಸಾಗುವಳಿದಾರರಿಗೆ ಸಾಗುವಳಿ ಚೀಟಿ ಹಾಗೂ ಹಕ್ಕು ಪತ್ರಗಳನ್ನು ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ಭೂ ಹಕ್ಕುದಾರರ ವೇದಿಕೆ ನೇತೃತ್ವದಲ್ಲಿ ಇಂದು ಪ್ರವಾಸಿ ಮಂದಿರದಿಂದ ಆರಂಭವಾಗಿ ತಾಲೂಕು ಕಛೇರಿವರೆಗೆ ಶಾಂತಿಯುತ ಪ್ರತಿಭಟನ ಮೆರವಣಿಗೆಯನ್ನು ನಡೆಸಲಾಯಿತು.

ಕಡೂರು ತಾಲೂಕಿನಲ್ಲಿ ಭೂ ರಹಿತರಾಗಿದ್ದ ಜನರು 80 – 90 ವರ್ಷಗಳಿಂದ ಬಗರ್ ಹುಕ್ಕುಂ ಸಾಗುವಳಿ ಮಾಡಿಕೊಂಡು ಬರುತ್ತಿದ್ದಾರೆ. ನಮೂನೆ 50-53 ಹಾಗೂ 57 ರಲ್ಲಿ ಅರ್ಜಿ ಹಾಕಿದ್ದು ಎರಡು ವರ್ಷಗಳಿಂದ ಇದರ ಸಕ್ರಮಿಕರಣದ ಬಗ್ಗೆ ಚಟುವಟಿಕೆ ನಡೆದಿಲ್ಲ, ಕೂಡಲೇ ಬಗರ್ ಹುಕ್ಕುಂ ಸಾಗುವಳಿದಾರರ ಅರ್ಜಿಗಳನ್ನು ವಿಲೇವಾರಿ ಮಾಡಬೇಕು, ವಾರಕ್ಕೊಂದು ಬಗರ್ ಹುಕ್ಕುಂ ಸಾಗುವಳಿದಾರರ ಸಕ್ರಮಿಕರಣ ಸಭೆಯನ್ನು ವಾರಕ್ಕೊಮ್ಮೆ ಕಡ್ಡಾಯವಾಗಿ ಮಾಡುವ ಮೂಲಕ ಬಾಕಿ ಉಳಿದಿರುವ ಅರ್ಜಿಗಳನ್ನು ಇತ್ಯರ್ಥ ಪಡಿಸಬೇಕೆಂಬ ಬೇಡಿಕೆ ಸೇರಿದಂತೆ ಹಲವಾರು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಶಾಂತಿಯುತ ಪ್ರತಿಭಟನ ಮೆರವಣಿಗೆಯನ್ನು ನಡೆಸಲಾಯಿತು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!