ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಭೂ ಹಕ್ಕುದಾರರ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆ
1 min readಕಡೂರು : ಬಗರ್ ಹುಕ್ಕುಂ ಹಾಗೂ ಅರಣ್ಯ ಹಕ್ಕಿನ ಸಾಗುವಳಿದಾರರಿಗೆ ಸಾಗುವಳಿ ಚೀಟಿ ಹಾಗೂ ಹಕ್ಕು ಪತ್ರಗಳನ್ನು ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ಭೂ ಹಕ್ಕುದಾರರ ವೇದಿಕೆ ನೇತೃತ್ವದಲ್ಲಿ ಇಂದು ಪ್ರವಾಸಿ ಮಂದಿರದಿಂದ ಆರಂಭವಾಗಿ ತಾಲೂಕು ಕಛೇರಿವರೆಗೆ ಶಾಂತಿಯುತ ಪ್ರತಿಭಟನ ಮೆರವಣಿಗೆಯನ್ನು ನಡೆಸಲಾಯಿತು.
ಕಡೂರು ತಾಲೂಕಿನಲ್ಲಿ ಭೂ ರಹಿತರಾಗಿದ್ದ ಜನರು 80 – 90 ವರ್ಷಗಳಿಂದ ಬಗರ್ ಹುಕ್ಕುಂ ಸಾಗುವಳಿ ಮಾಡಿಕೊಂಡು ಬರುತ್ತಿದ್ದಾರೆ. ನಮೂನೆ 50-53 ಹಾಗೂ 57 ರಲ್ಲಿ ಅರ್ಜಿ ಹಾಕಿದ್ದು ಎರಡು ವರ್ಷಗಳಿಂದ ಇದರ ಸಕ್ರಮಿಕರಣದ ಬಗ್ಗೆ ಚಟುವಟಿಕೆ ನಡೆದಿಲ್ಲ, ಕೂಡಲೇ ಬಗರ್ ಹುಕ್ಕುಂ ಸಾಗುವಳಿದಾರರ ಅರ್ಜಿಗಳನ್ನು ವಿಲೇವಾರಿ ಮಾಡಬೇಕು, ವಾರಕ್ಕೊಂದು ಬಗರ್ ಹುಕ್ಕುಂ ಸಾಗುವಳಿದಾರರ ಸಕ್ರಮಿಕರಣ ಸಭೆಯನ್ನು ವಾರಕ್ಕೊಮ್ಮೆ ಕಡ್ಡಾಯವಾಗಿ ಮಾಡುವ ಮೂಲಕ ಬಾಕಿ ಉಳಿದಿರುವ ಅರ್ಜಿಗಳನ್ನು ಇತ್ಯರ್ಥ ಪಡಿಸಬೇಕೆಂಬ ಬೇಡಿಕೆ ಸೇರಿದಂತೆ ಹಲವಾರು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಶಾಂತಿಯುತ ಪ್ರತಿಭಟನ ಮೆರವಣಿಗೆಯನ್ನು ನಡೆಸಲಾಯಿತು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g