April 29, 2024

MALNAD TV

HEART OF COFFEE CITY

ಇತಿಹಾಸ ಪ್ರಸಿದ್ಧ ಮೈಲಾರಲಿಂಗೇಶ್ವರ ಸ್ವಾಮಿಯ ಕಾರ್ಣಿಕ ನುಡಿಮುತ್ತು

1 min read

ಚಿಕ್ಕಮಗಳೂರು: ‘ಇಟ್ಟ ರಾಮನ ಬಾಣ ಹುಸಿಯಿಲ್ಲ.ಸುರರು ಅಸೂರರು ಕಾದಾಡಿದರು. ಭಕ್ತ ಕೋಟಿಗೆ ಮಂಗಳವಾಯಿತು. ಶಾಂತಿಯ ಮಂತ್ರ ಪಠಿಸಿದರು. ಸರ್ವರು ಎಚ್ಚರದಿಂದ ಇರಬೇಕು ಪರಾಕ್’ ಎಂದು ಚಿಕ್ಕಮಗಳೂರು ಜಿಲ್ಲೆಯ ಇತಿಹಾಸ ಪ್ರಸಿದ್ಧ ಮೈಲಾರಲಿಂಗೇಶ್ವರ ಸ್ವಾಮಿಯ ಕಾರ್ಣಿಕದ ನುಡಿಮುತ್ತು ಹೊರಬಿದ್ದಿದೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರಿನ‌ ಮಹಾನವಮಿ ಬಯಲಿನಲ್ಲಿ ದಶರಥ ಪೂಜಾರ್ ಅವ್ರಿಂದ ಅವರಿಂದ ಇಂದು ಮುಂಜಾನೆ 4.42ಕ್ಕೆ ಹೊರಬಂದ ಭವಿಷ್ಯವಾಣಿ. ಬೀರೂರು ಪಟ್ಟಣದಲ್ಲಿರುವ ಮೈಲಾರಲಿಂಗ ಸ್ವಾಮಿ ದೇವಸ್ಥಾನದಲ್ಲಿ ರಾತ್ರಿಯಿಂದ ಹೂವಿನ ಪಲಕ್ಕಿಯೊಂದಿಗೆ ಮೈಲಾರಲಿಂಗ ಸ್ವಾಮಿಯ ಮೆರವಣಿಗೆ ನಡೆಯಿತು. ಮೈಲಾರಲಿಂಗೇಶ್ವರ ದರ್ಶನಕ್ಕೆ ರಾಜ್ಯದ ವಿವಿಧ ಮೂಲೆಗಳಿಂದ ಭಕ್ತರು ಆಗಮಿಸಿದ್ದರು. ಈ ಹಿಂದೆಯೂ ಕಾರ್ಣಿಕದ ನುಡಿಯಂತೆ ಹಲವು ಘಟನೆಗಳು ನಡೆದಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!