May 17, 2024

MALNAD TV

HEART OF COFFEE CITY

ಜಿಲ್ಲೆಗೆ ಮಂತ್ರಿ ಸ್ಥಾನ ಕೈ ತಪ್ಪಿದಕ್ಕೆ ಕರವೇ ಜಿಲ್ಲಾಧ್ಯಕ್ಷ ತೇಗೂರು ಜಗದೀಶ್ ಬೇಸರ

1 min read

ಚಿಕ್ಕಮಗಳೂರು: ಒಗ್ಗಟ್ಟಿನ ಕೊರತೆಯಿಂದ ಈ ದಿನ ನಡೆದ ಸಚಿವ ಸಂಪುಟದಲ್ಲಿ ಜಿಲ್ಲೆಯ ಒಬ್ಬರಿಗೂ ಸಚಿವ ಸ್ಥಾನವನ್ನು ನೀಡದಿರುವುದು ಬೇಸರದ ಸಂಗತಿ ಎಂದು ಕರವೇ ಜಿಲ್ಲಾಧ್ಯಕ್ಷ  ತೇಗೂರು ಜಗದೀಶ್ ಬೇಸರ ವ್ಯಕ್ತ ಪಡಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಇವತ್ತಿನ ಪರಿಸ್ಥಿತಿಯನ್ನು ನೋಡಿದರೆ ನಾಚಿಕೆಯಾಗುತ್ತದೆ. ಕಾರಣ ರಾಜ್ಯ ರಾಜಕಾರಣ ಹಾಗೂ ಕೇಂದ್ರ ರಾಜಕೀಯದಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ಒಂದು ದೊಡ್ಡ ಇತಿಹಾಸ ಇದೆ. ಹಿಂದಿನಿಂದಲೂ ಯಾವುದೇ ಸರ್ಕಾರ ಅಸ್ಥಿತ್ವಕ್ಕೆ ಬಂದ ಸಮಯದಲ್ಲಿ ಸಚಿವ ಸಂಪುಟದಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ಮೊದಲನೇ ಪ್ರಾತಿನಿಧ್ಯ ಸಿಗುತ್ತಿತ್ತು. ಸುಮಾರು ವರ್ಷಗಳ ಹಿಂದೆ ಕಾಂಗ್ರೆಸ್ ಸರ್ಕಾರ ಇದ್ದಾಗ ಮೂರು ಜನ ಮಂತ್ರಿ ಯಾಗಿದ್ದರು ಜನತಾ ದಳ ಸರ್ಕಾರ ಇದ್ದಾಗಲೂ ಜಿಲ್ಲೆಯಲ್ಲಿ ಮಂತ್ರಿಗಳು ಇದ್ದರು ನಂತರ ಬಿಜೆಪಿ ಸರ್ಕಾರ ಬಂದಾಗಲೂ ಸಿ.ಟಿ. ರವಿ ಹಾಗೂ ಜೀವರಾಜ್ ಮಂತ್ರಿ ಯಾಗಿದ್ದರು ದುರಂತ ಎಂದರೆ..  ಈ ಬಾರಿ ಜಿಲ್ಲೆಯಲ್ಲಿ ನಾಲ್ಕು ಜನ ಶಾಸಕರಿದ್ದರೂ ಇವರ ಒಳಜಗಳ ಸ್ವಪ್ರತಿಷ್ಠೆಯಿಂದ ಮತ್ತು ಒಗ್ಗಟ್ಟಿನ ಕೊರತೆಯಿಂದ ಈ ದಿನ ನೆಡೆದ ಸಚಿವ ಸಂಪುಟದಲ್ಲಿ ಒಬ್ಬರಿಗೂ ಸಚಿವ ಸ್ಥಾನವನ್ನು ನೀಡದಿರುವುದು ಬೇಸರದ ಸಂಗತಿ ಯಾಗಿದೆ ಎಂದು ತಿಳಿಸಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!