May 18, 2024

MALNAD TV

HEART OF COFFEE CITY

ಸದಸ್ಯತ್ವ ಮಾಡಿಸದ ಜಿಲ್ಲಾ ಮುಖಂಡರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕ್ಲಾಸ್

1 min read

 

ಚಿಕ್ಕಮಗಳೂರು. ಜಿಲ್ಲೆಯಲ್ಲಿ ತರೀಕೆರೆ ತಾಲೂಕು ಹೊರತುಪಡಿಸಿ ಬೇರೆಲ್ಲೂ ನಿರೀಕ್ಷೆಯಂತೆ ಯಾರೂ ಕಾಂಗ್ರೆಸ್ ಸದಸ್ಯತ್ವ ಮಾಡಿಸಿಲ್ಲ ಎಂದು ಜಿಲ್ಲಾ ಮುಂಡರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಖಾರವಾಗಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಅವರು ಇಂದು ರಂಭಾಪುರಿ ಪೀಠದಲ್ಲಿ ನಡೆಯುತ್ತಿದ್ದ ಯುಗಮಾನೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಕಾರ್ಯಕ್ರಮದ ಬಳಿಕ ಜಿಲ್ಲೆಯ ಕಾಂಗ್ರೆಸ್ ಡಿಜಿಟಲ್ ಸದಸ್ಯತ್ವ ಅಭಿಯಾನದ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ ನಿರೀಕ್ಷೆಯಂತೆ ಸದಸ್ಯತ್ವ ಮಾಡಿಸದ ಜಿಲ್ಲಾ ಮುಖಂಡರಿಗೆ ಸಖತ್ತಾಗೆ ಕ್ಲಾಸ್ ತೆಗೆದುಕೊಂಡರು. ತರೀಕೆರೆ ತಾಲೂಕಿನಲ್ಲಿ ಮಾತ್ರ 35 ಸಾವಿರ ಸದಸ್ಯತ್ವ ಮಾಡಿಸಿದ್ದಾರೆ. ಉಳಿದ ಎಲ್ಲೂ ಆಗಿಲ್ಲ ಎಂದು ಎಲ್ಲರಿಗೂ ಕ್ಲಾಸ್ ತೆಗೆದುಕೊಂಡು ಮಾಡಿಸಲೇಬೇಕು ಎಂದು ಕಡ್ಡಿ ಮುರಿದಂತೆ ಸೂಚಿಸಿದ್ದಾರೆ. ಇದೇ ವೇಳೆ, ಮಾಜಿ ಸಚಿವೆ, ಕಾಂಗ್ರೆಸ್ ಹಿರಿಯ ನಾಯಕಿ ಮೋಟಮ್ಮಗೆ ಡಿ.ಕೆ.ಶಿವಕುಮಾರ್ ಸಾರ್ವಜನಿಕರ ಮಧ್ಯೆ ಅವಮಾನವಾಗುವ ರೀತಿ ವರ್ತಿಸಿದ ಘಟನೆಯೂ ನಡೆಯಿತು. ಮೋಟಮ್ಮ ಮಗಳು ನಯನಾ ಮೋಟಮ್ಮ ಮಾತನಾಡುವಾಗ ನಮಗೆ ಜವಾಬ್ದಾರಿ ನೀಡಿಲ್ಲ ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯೇ ನೀಡಿದ ಡಿಕೆಶಿ ನಿಮ್ಮ ತಾಯಿಯನ್ನ ಶಾಸಕಿ, ಮಿನಿಸ್ಟರ್, ಎಂ.ಎಲ್.ಸಿ. ಮಾಡಿದ್ದೇವೆ. ಇನ್ನೇನು ಮಾಡಬೇಕು. ಇಷ್ಟಾದರೂ ನಾನು ಹಂಗೂ ಇಲ್ಲ, ಹಿಂಗೂ ಇಲ್ಲ ಅಂದರೆ ಯಾರು ಕೇಳುತ್ತಾರೆ ಎಂದರು. ಬಳಿಕ ಕಾರ್ಯಕ್ರಮ ಮುಗಿದ ಮೇಲೆ ಮೋಟಮ್ಮ ಬಂದು ಡಿ.ಕೆ.ಶಿವಕುಮಾರ್ ಅವರನ್ನ ಮಾತನಾಡಿಸಲು ಯತ್ನಿಸಿದರು ಪ್ರತಿಕ್ರಿಯೇ ನೀಡದೆ ಹೋದರು.

ಆಗ ಕಾಂಗ್ರೆಸ್ ಹಿರಿಯ ನಾಯಕಿ ಮೋಟಮ್ಮಗೆ ಮುಜುಗರವೂ ಉಂಟಾಯಿತು. ಇದೇ ವೇಳೆ, ಜಿಲ್ಲೆಯಲ್ಲಿನ ಡಿಜಿಟಲ್ ಸದಸ್ಯತ್ವದ ಬಗ್ಗೆ ಜಿಲ್ಲಾ ಮುಖಂಡರಿಗೆ ಡಿಕೆಶಿ ಸಖತ್ತಾಗೆ ಕ್ಲಾಸ್ ತೆಗೆದುಕೊಂಡರು. ತರೀಕೆರೆ ತಾಲೂಕು ಹೊರತುಪಡಿಸಿದರೆ ಉಳಿದ ಕಡೆ ನಿರೀಕ್ಷೆಯಷ್ಟು ಸದಸ್ಯತ್ವ ಮಾಡಿಸಿಲ್ಲ. ಒಬ್ಬೊಬ್ಬರು ಒಂದೊಂದು ಕಾರಣ ಹೇಳುತ್ತಿದ್ದಾರೆ. ನಾನು ಯಾವ ಕಾರಣವನ್ನೂ ಕೇಳುವುದಿಲ್ಲ. ಪ್ರತಿದಿನದ ಬೆಳವಣಿಗೆಯನ್ನ ರಾಹುಲ್ ಗಾಂಧಿ ನೋಡುತ್ತಿದ್ದಾರೆ, ಸದಸ್ಯತ್ವ ಮಾಡಿಸಲೇಬೇಕು ಎಂದು ಕಡ್ಡಿ ಮುರಿದಂತೆ ಹೇಳಿದರು. ಹೆಚ್ಚು ಸದಸ್ಯತ್ವ ಮಾಡಿಸಿದವರಿಗೆ ನಾಯಕತ್ವದ ಅವಕಾಶ ಸಿಗಲಿದೆ. ಸದಸ್ಯರನ್ನೇ ಮಾಡಿಸದಿದ್ದರೆ ಮತ ಹೇಗೆ ತೆಗೆದುಕೊಳ್ತೀರಾ ಎಂದು ಪ್ರಶ್ನಿಸಿದರು. ನಮ್ಮ ಪಕ್ಷಕ್ಕೆ ಮೆಂಬರ್‍ಶಿಪ್ ಪೌಂಡೇಷನ್. ಎಲ್ಲರೂ ಮಾಡಿಸಲೇಬೇಕು ಎಂದು ಎಲ್ಲರಿಗೂ ಸಖತ್ತಾಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಅಂಶುಮಂತ್ ನಿಮ್ಮ ಮೇಲೆ ಸಾಕಷ್ಟು ನಿರೀಕ್ಷೆ ಇತ್ತು. ಆದರೆ ಇಂದು ಎಲ್ಲಾ ಲಾಸ್ ಆಯ್ತು ಎಂದರು. ಇನ್ನು ಇದೇ ವೇಳೆ, ಬಿಜೆಪಿ ಪರಿಷತ್‍ನಲ್ಲಿ ಮತಾಂತರ ನಿಷೇಧ ಕಾಯ್ದೆ ಪಾಸ್‍ಗೆ ಸಿದ್ಧತೆ ನಡೆಸುತ್ತಿದ್ದಾರೆ. ನಾವು ಅದನ್ನ ವಿರೋಧಿಸುತ್ತಲೇ ಬಂದಿದ್ದೇವೆ. ಅವರು ಏನು ಬೇಕೋ ಅದನ್ನ ಮಾಡಿಕೊಳ್ಳಲಿ. ಬಿಜೆಪಿಯವರು ಜನರಲ್ಲಿ ಗೊಂದಲ ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ, ಮುಂದೆ ನಮ್ಮ ಸರ್ಕಾರ ಬರುತ್ತೆ ಆಗ ನಾವು ಎಲ್ಲಾ ರಿವರ್ಸ್ ಮಾಡುತ್ತೇವೆ ಎಂದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!