ಕೆ ಎಸ್ ಆರ್ ಟಿಸಿ ಸಿಬ್ಬಂದಿಗಳಿಗೆ ಮಾಸ್ಕ್ ವಿತರಣೆ-ಶ್ಯಾಮಪ್ರಸಾದ್ ಮುಖರ್ಜಿ ಜನ್ಮದಿನದ ಅಂಗವಾಗಿ ಬಿಜೆಪಿಯಿಂದ ಮಾಸ್ಕ್ ಹಂಚಿಕೆ
1 min readಚಿಕ್ಕಮಗಳೂರು :
ಭಾರತೀಯ ಜನಸಂಘ ಸಂಸ್ಥಾಪಕರಾದ ಡಾ.ಶ್ಯಾಮಪ್ರಸಾದ್ ಮುಖರ್ಜಿ ಯವರ ಜನ್ಮ ದಿನದ ಅಂಗವಾಗಿ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಪದಾಧಿಕಾರಿಗಳು ಭಾವಚಿತ್ರಕ್ಕೆ ಪುಪ್ಪನಮನ ಸಲ್ಲಿಸಿದ್ರು,
ಚಿಕ್ಕಮಗಳೂರು ನಗರದ ಕೆ ಎಸ್ ಆರ್ ಟಟಿಸಿ ಬಸ್ ನಿಲ್ದಾಣದಲ್ಲಿ ಡಾ.ಶ್ಯಾಮಪ್ರಸಾದ್ ಮುಖರ್ಜಿ ಭಾವಚಿತ್ರಕ್ಕೆ ಪುಪ್ಪನಮನ ಸಲ್ಲಿಸಿ ಗೌರವ ಸಲ್ಲಿಸಿದ್ರು. ನಂತರ ಕೆ ಎಸ್ ಆರ್ ಟಿಸಿ ಚಾಲಕ ಹಾಗೂ ನಿರ್ವಾಹಕ ರಿಗೆ ಉಚಿತವಾಗಿ ಮಾಸ್ಕ್ ವಿತರಿಸಿದ್ರು. ಇದೇ ವೇಳೆ ಸಿಬ್ಬಂದಿ ಗಳಿಗೆ ಸಿಹಿ ಹಂಚಿದ್ದರು. ಈ ವೇಳೆ ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದ ಸಂದೀಪ್, ಪ್ರಧಾನ ಕಾರ್ಯದರ್ಶಿಗಳಾದ ಸಂತೋಷ್ ಕೋಟ್ಯಾನ್ , ಕಾರ್ಯದರ್ಶಿಗಳಾದ ಕೌಶಿಕ್, ಶಶಿ ಆಲ್ದೂರು ,ಖಜಾಂಚಿ ಗಳಾದ ಕಾಂಚನ್, ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಸೌಮ್ಯಶ್ರೀ ಆಲ್ದೂರು ಮಂಡಲ ಪ್ರಧಾನ ಕಾರ್ಯದರ್ಶಿಯಾದ ಸ್ವರೂಪ್ ಕಬ್ಬಿಣ ಸೇತುವೆ ನಗರ ಯುವ ಮೋರ್ಚಾ ಕಾರ್ಯದರ್ಶಿಯಾದ ಪುನೀತ್ ಸೂರ್ಯ, ಕಾರ್ಯಕಾರಣಿ ಸದಸ್ಯರಾದ ಗೌತಮ್, ಪ್ರಶಾಂತ್ ಮತ್ತು ಪ್ರಮುಖರು ಉಪಸ್ಥಿತರಿದ್ದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g