ಕುದುರೆಮುಖ ಅರಣ್ಯ ವ್ಯಾಪ್ತಿಯಲ್ಲಿ ನಿರಂತರ ಮಳೆ ಹಿನ್ನಲೆ ಭದ್ರಾ ನದಿ ಹರಿವಿನಲ್ಲಿ ಏರಿಕೆ
1 min read
ಚಿಕ್ಕಮಗಳೂರು : ಕಾಫಿನಾಡಿನ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕುದುರೆಮುಖ ಅರಣ್ಯ ವ್ಯಾಪ್ತಿಯಲ್ಲಿ ನಿರಂತರ ಮಳೆಯಾದ ಹಿನ್ನಲೆಯಲ್ಲಿ ಭದ್ರಾ ನದಿ ಹರಿವಿನಲ್ಲಿ ಭಾರೀ ಏರಿಕೆಯಾಗಿದೆ. ಸಂಜೆಯ ಬಳಿಕ ಭದ್ರಾ ನದಿ ಹರಿವಿನಲ್ಲಿ ಏರಿಕೆಯಾಗಿದೆ. ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಬಳಿ ಅಪಾಯ ಮಟ್ಟ ತಲುಪಿದ್ದು ಹೆಬ್ಬಾಳೆ ಸೇತುವೆ ಮುಳುಗಡೆಯಾಗುವ ಸಾಧ್ಯತೆ ಇದ್ದು ಹೆಬ್ಬಾಳೆ ಸೇತುವೆ ಮುಳುಗಡೆಗೆ ನಾಲ್ಕು ಅಡಿಯಷ್ಟೆ ಬಾಕಿ ಇದೆ. ಮಲೆನಾಡು ಭಾಗದಲ್ಲಿ ಸಂಜೆ ಬಳಿಕ ಮಳೆ ಬಿರುಸುಗೊಂಡಿದ್ದು ಮಲೆನಾಡಿನ ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ತಾಲೂಕಿನ ಭಾರೀ ಮಳೆಯಾಗುತ್ತಿದೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g