ವಿದೇಶದಲ್ಲಿ ಕೀರ್ತಿ ಪತಾಕೆ ಹಾರಿಸಿದ ಕಾಫಿನಾಡಿನ ಕುವರಿ..!
1 min readಚಿಕ್ಕಮಗಳೂರು: ಶ್ರೀಲಂಕಾದಲ್ಲಿ ನಡೆದ 7ನೇ ಅಂತಾರಾಷ್ಟ್ರೀಯ ಕರಾಟೆ ಪಂದ್ಯಾವಳಿಯಲ್ಲಿ ಚಿಕ್ಕಮಗಳೂರಿನ ಕುವರಿ ಕಮಾಲ್ ಮಾಡಿದ್ದಾರೆ. ಕಟ ಮತ್ತು ಕುಮತಿ ವಿಭಾಗದಲ್ಲಿ ಕ್ರಮವಾಗಿ ದ್ವಿತೀಯ ಹಾಗೂ ತೃತೀಯ ಸ್ಥಾನವನ್ನ ಕನ್ನಡತಿ ದಿವ್ಯ ಪಿ.ಎನ್. ಪಡೆದುಕೊಂಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಿಂದ ಪ್ರಥಮ ಬಾರಿಗೆ ಹೊರದೇಶಕ್ಕೆ ಹೋಗಿ ಭಾಗವಹಿಸಿ ಪದಕ ಗೆಲ್ಲುವ ಮೂಲಕ ಕರ್ನಾಟಕದ ಕೀರ್ತಿ ಪತಾಕೆಯನ್ನು ವಿದೇಶದಲ್ಲೂ ಹಾರಿಸಿದ್ದಾರೆ. ಕ್ರೀಡಾಪಟು ದಿವ್ಯ ಮಾತನಾಡಿ, ತನ್ನ ಪೋಷಕರಿಗೆ ಹಾಗೂ ತರಬೇತಿದಾರರಾದ ಸೈಯದ್ ರಿಯಾಝ್ ಅವರಿಗೆ ವಂದನೆಗಳನ್ನು ತಿಳಿಸುತ್ತೇನೆ. ನನಗೆ ಈ ಅವಕಾಶ ಕಲ್ಪಿಸಿದ ಚಿಕ್ಕಮಗಳೂರು ಜಿಲ್ಲೆ ಹಾಗೂ ಕರ್ನಾಟಕ ರಾಜ್ಯದ ಕರಾಟೆ ಸಂಸ್ಥೆಗೆ ಹೃತ್ಪೂರ್ವಕ ವಂದನೆಗಳು ಎಂದು ಸಂಸತ ಹಂಚಿಕೊಂಡರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g