May 5, 2024

MALNAD TV

HEART OF COFFEE CITY

ವಕೀಲರು-ಪೊಲೀಸರ ಸಂಘರ್ಷ: ವಿವಿಧ ಸಂಘಟನೆಗಳಿಂದ ರಾಜಿ-ಸಂಧಾನಕ್ಕೆ ಮನವಿ ಸಲ್ಲಿಕೆ

1 min read

ಚಿಕ್ಕಮಗಳೂರು: ವಕೀಲರು ಹಾಗೂ ಪೊಲೀಸರ ನಡುವಿನ ಸಂಘರ್ಷ ದಿನೇ ದಿನೇ ಮುಂದುವರೆಯುತ್ತಿದ್ದಂತೆ ಎರಡೂ ಕಡೆಯವರ ಮೇಲೆ ಪರ ವಿರೋಧ ಸಮರ್ಥನೆಗಳು ಹೆಚ್ಚಾಗುತ್ತಿವೆ. ಪೊಲೀಸರು ಮತ್ತು ವಕೀಲರ ನಡುವೆ ನಡೆಯುತ್ತಿರುವ ಪ್ರತಿಷ್ಟೆಯ ಸಮರ ದಿನ ಕಳೆದಂತೆ ತಾರಕ್ಕಕೇರುತ್ತಿದ್ದು ಕೆಲ ಸಂಘಟನೆಗಳು ಇಬ್ಬರ ನಡುವೆ ರಾಜಿ-ಸಂಧಾನ ಮಾಡಿ ಎಂದರೆ ಕೆಲವರು ಪೊಲೀಸ್ ಪರ ಕೆಲವರು ವಕೀಲರ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ. ದಲಿತ ಸಂಘಟನೆಯ ಸಾಗರ್ ಬಣ ಎರಡೂ ಕಡೆಯವರನ್ನು ಕರೆಸಿ ಮಧ್ಯಸ್ಥಿಕೆ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿ ಎಂದು ಹೆಚ್ಚುವರಿ ಎಸ್ಪಿ ಕೃಷ್ಣಮೂರ್ತಿ ಬಳಿ ತೆರಳಿ ಮನವಿ ಸಲ್ಲಿಸಿದರು. ಈ ಮಧ್ಯೆ ಕೆಆರ್ ಎಸ್ ಪಕ್ಷದ ಕಾರ್ಯಕರ್ತರು ಪೊಲೀಸ್ ಹಾಗೂ ವಕೀಲರು ದೈಹಿಕ ಹಲ್ಲೆ ನಡೆಸಿದ್ದು ಇಬ್ಬರ ಮೇಲೂ ಕ್ರಮ ಕೈಗೊಳ್ಳುವಂತೆ ತಮ್ಮ ನಿಲುವು ವ್ಯಕ್ತಪಡಿಸಿದ್ದಾರೆ. 

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!