ವಕೀಲರು vs ಪೊಲೀಸರು: ನಾಳಿನ ಬೆಂಗಳೂರು ಸಭೆಯತ್ತ ಎಲ್ಲರ ಚಿತ್ತ..!
1 min readಚಿಕ್ಕಮಗಳೂರು: ವಕೀಲರು ಹಾಗೂ ಪೊಲೀಸರ ನಡುವಿನ ಸಂಘರ್ಷ ಪ್ರಕರಣ ಪ್ರಮುಖ ಘಟ್ಟ ತಲುಪಿದ್ದು ಹೈ ಕೋರ್ಟ್ ಸೂಚನೆಯಂತೆ ನಾಳೆ ಬೆಂಗಳೂರಿನಲ್ಲಿ ಮಹತ್ವ ಸಭೆ ನಡೆಯಲಿದ್ದು, ಚಿಕ್ಕಮಗಳೂರು ವಕೀಲರ ಸಂಘದ ಅಧ್ಯಕ್ಷ ಸುಧಾಕರ್ ಭಾಗವಹಿಸಿ ತಮ್ಮ ವಾದ ಮುಂದಿಡಲಿದ್ದಾರೆ.
ಚಿಕ್ಕಮಗಳೂರು ವಕೀಲರು ಹಾಗೂ ಪೊಲೀಸರ ನಡುವಿನ ಸಂಘರ್ಷ ಬೆಂಗಳೂರಿಗೆ ಶಿಫ್ಟ್ ಆಗಿದ್ದು ನಾಳೆ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಸಮ್ಮುಖದಲ್ಲಿ ಮಹತ್ವದ ಸಭೆ ನಡೆಯಲಿದೆ. ಹೈಕೋರ್ಟ್ ಸೂಚನೆಯಂತೆ ಎರಡೂ ಕಡೆಯ ರಾಜ್ಯಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದು ಇದೀಗ ಎಲ್ಲರ ಚಿತ್ತ ನಾಳಿನ ಈ ಸಭೆಯತ್ತ ನೆಟ್ಟಿದೆ. ಎಜಿ ಜೊತೆಗೆ ಡಿ.ಜಿ ಐಜಿಪಿ, ಬಾರ್ ಕೌನ್ಸಿಲ್ ಅಧ್ಯಕ್ಷ ಸಿಐಡಿ ಡಿಜಿಪಿ, ಗೃಹ ಇಲಾಖೆ ಕಾರ್ಯದರ್ಶಿ ಜೊತೆಗೆ ಚಿಕ್ಕಮಗಳೂರು ವಕೀಲರ ಸಂಘದ ಅಧ್ಯಕ್ಷ ಎಚ್.ಎಂ ಸುಧಾಕರ್ ಸಹಾ ಪಾಲ್ಗೊಳ್ಳಲಿದ್ದಾರೆ. ನಾಳೆ ಬೆಂಗಳೂರಿಗೆ ತೆರಳಿ ಸಭೆಯಲ್ಲಿ ಭಾಗವಹಿಸುವ ಬಗ್ಗೆ ಪ್ರತಿಕ್ರಿಯಿಸಿದ ಅಧ್ಯಕ್ಷ ಸುಧಾಕರ್ ವಕೀಲ ಪ್ರೀತಂ ಮೇಲೆ ಹಲ್ಲೆ ನಡೆಸಿದ ಪೊಲೀಸರ ಬಂಧನ ನಮ್ಮ ಪ್ರಮುಖ ಬೇಡಿಕೆ ಎಂದಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g