ಕಡೂರಿನ ಮದಗದ ಕೆರೆ ಬಳಿ ದಾರಿ ಹೊಕ್ಕರು ಮೇಲೆ ಚಿರತೆ ದಾಳಿ, ಇಬ್ಬರಿಗೆ ಗಾಯ
1 min read
ಚಿಕ್ಕಮಗಳೂರು : ದಾರಿಹೋಕರ ಇಬ್ಬರ ಮೇಲೆ ಚಿರತೆ ಅಟ್ಯಾಕ್ ಮಾಡಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಎಮ್ಮೆದೊಡ್ಡಿ ಗ್ರಾಮದಲ್ಲಿ ನಡೆದಿದೆ. ಎಮ್ಮೆದೊಡ್ಡಿ ಗ್ರಾಮದ ಮೂರ್ತಣ್ಣ ಹಾಗೂ ಮಂಜಣ್ಣ ಎಂಬುವರು ಬೆಳಗ್ಗೆ ಸಖರಾಯಪಟ್ಟಣಕ್ಕೆ ಬರುವಾಗ ರಸ್ತೆ ಮಧ್ಯೆ ಚಿರತೆ ದಾಳಿ ಮಾಡಿದೆ. ಮೂರ್ತಣ್ಣ ಎಂಬುವರ ಎಡಗೈನ ಒಂದು ಬೆರಳನ್ನ ಚಿರತೆ ತಿಂದಿದ್ದು ಮಂಜಣ್ಣ ಎಂಬುವರ ಎಡಗೈಗೂ ಗಂಭೀರ ಗಾಯವಾಗಿದೆ. ಚಿರತೆ ಮತ್ತೊಬ್ಬರ ಮೇಲೆ ದಾಳಿಗೆ ಯತ್ನಿಸುತ್ತಿದ್ದಂತೆ ಸ್ಥಳೀಯರು ಕೂಗಾಡಿದ್ದು, ಚಿರತೆ ತಕ್ಷಣ ಓಡಿಹೋಗಿದೆ. ಸ್ಥಳೀಯರು ಚಿರತೆಯನ್ನ ಕಲ್ಲಿನಿಂದ ಹೊಡೆದು ಓಡಿಸಿದ್ದಾರೆ. ಎಮ್ಮೆದೊಡ್ಡಿ ಗ್ರಾಮದ ಸುತ್ತಮುತ್ತಲಿನ ಅರಣ್ಯ ಪ್ರದೇಶದಲ್ಲೇ ಇರುವ ಚಿರತೆ ರಸ್ತೆಯಲ್ಲಿ ಕಾಣುತ್ತಿರುವವರ ಮೇಲೆಲ್ಲಾ ದಾಳಿಗೆ ಮುಂದಾಗುತ್ತಿದೆ. ಚಿರತೆ ದಾಳಿ ವಿಷಯ ತಿಳಿಯುತ್ತಿದ್ದಂತೆ ನೂರಾರು ಜನ ಮದಗದ ಕೆರೆ ಏರಿ ಮೇಲೆ ಸೇರಿದ್ದಾರೆ. ಅಲ್ಲಿಗೂ ಬಂದಂತ ಚಿರತೆ ಮತ್ತೊಬ್ಬರ ಮೇಲೆ ದಾಳಿಗೆ ಯತ್ನಿಸಿದೆ. ನೂರಾರು ಜನ ಕಲ್ಲಿನಿಂದ ಹೊಡೆದು ಚಿರತೆಯನ್ನು ಓಡಿಸಿದ್ದಾರೆ. ಆದರೆ ಜನ ರಸ್ತೆಯಲ್ಲಿ ಓಡಾಡಲು ಹಿಂದೇಟು ಹಾಕುತ್ತಿದ್ದಾರೆ. ಕೊಡಲೇ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಚಿರತೆಯನ್ನು ಸೆರೆಹಿಡಿದು, ಸ್ಥಳಾಂತರ ಮಾಡಬೇಕೆಂದು ಸ್ಥಳಿಯರು ಆಗ್ರಹಿಸಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g

