May 21, 2024

MALNAD TV

HEART OF COFFEE CITY

ಕಾಫಿ ತೋಟದಲ್ಲಿ ಚಿರತೆ, ಸೆರೆ ಹಿಡಿದ ಅರಣ್ಯಾಧಿಕಾರಿಗಳು

1 min read

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಇಷ್ಟು ದಿನಗಳ ಕಾಲ ಆನೆ-ಹುಲಿ ಭಯ ಇತ್ತು. ಇದೀಗ, ಆನೆ-ಹುಲಿ ಮಧ್ಯೆ ಚಿರತೆ ಭಯ ಕೂಡ ಆರಂಭವಾಗಿದ್ದು ಮಲೆನಾಡಿಗರು ಕಾಡುಪ್ರಾಣಿಗಳ ಭಯದಲ್ಲಿ ಬದುಕುವಂತಾಗಿದೆ. ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದ ರಮೇಶ್ ಎಂಬುವರ ತೋಟದಲ್ಲಿ ಚಿರತೆ ಕಾಣಿಸಿಕೊಂಡಿದ್ದು ತೋಟದ ಮಾಲೀಕರು, ಕೂಲಿ ಕಾರ್ಮಿಕರು ಕಂಗಾಲಾಗಿದ್ದಾರೆ. ಕಾರ್ಮಿಕರು ತೋಟದಲ್ಲಿ ಕೆಲಸ ಮಾಡುವ ವೇಳೆ ಕಾಫಿ ಗಿಡಗಳ ಮಧ್ಯೆ ಚಿರತೆ ಇರುವುದು ಕಂಡು ಬಂದಿದೆ. ಕೂಡಲೇ ಕಾರ್ಮಿಕರು ಕೆಲಸ ಬಿಟ್ಟು ಬಂದಿದ್ದಾರೆ. ಚಿರತೆಯನ್ನ ಗಮನಿಸಿದ ತೋಟದ ಮಾಲೀಕ ರಮೇಶ್ ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿಗಳು ಬಲೆ ಹಾಕಿ ಚಿರತೆಯನ್ನ ಸೆರೆ ಹಿಡಿದಿದ್ದಾರೆ.

 

ಚಿರತೆ ಗಾಯಗೊಂಡಿದ್ದರಿಂದ ಅರಣ್ಯ ಇಲಾಖೆಯ ಸಿಬ್ಬಂದಿಗಳು ಮೂಡಿಗೆರೆ ಪಶು ಆಸ್ಪತ್ರೆಗೆ ಕರೆ ತಂದು ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ಚಿರತೆಯ ಆರೋಗ್ಯ ಸುಧಾರಿಸುವ ಲಕ್ಷಣ ಗಮನಿಸಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಮೃಗಾಲಯ ಅಥವಾ ಕಾಡಿಗೆ ಬಿಡುವ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾಫಿ ತೋಟದ ಮಧ್ಯೆ ಇದ್ದ ಚಿರತೆ ಕೂಲಿ ಕಾರ್ಮಿಕರನ್ನ ನೋಡಿದರೂ ಕೂಡ ದಾಳಿ ಮಾಡಿಲ್ಲ. ಚಿರತೆ ಗಾಯಗೊಂಡಿದ್ದರಿಂದ ದಾಳಿ ಮುಂದಾಗಿಲ್ಲ ಎಂದು ಹೇಳಲಾಗಿದೆ. ವಲಯ ಅರಣ್ಯ ಅಧಿಕಾರಿ ಮೋಹನ್ ಕುಮಾರ್, ಉಪ ವಲಯ ಅರಣ್ಯಾಧಿಕಾರಿ ಚೇತನ್, ಶಿವಕುಮಾರ್, ಗಾರ್ಡ್‍ಗಳಾದ ಕುಮಾರ್, ಗಿರೀಶ್, ಮೌಸೀಫ್ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!