May 17, 2024

MALNAD TV

HEART OF COFFEE CITY

ಪರಿಸರ ಸ್ನೇಹಿ ದೀಪಾವಳಿಯನ್ನು ಆಚರಣೆ ಮಾಡೋಣ; ಮಂಜುಳಾ ಬನ್ಸಾಲಿ

1 min read

ಚಿಕ್ಕಮಗಳೂರು: ಜಿಲ್ಲಾಡಳಿತದ ಆದೇಶದಂತೆ ಈ ಬಾರಿ ಪರಿಸರ ಸ್ನೇಹಿ ದೀಪಾವಳಿಯನ್ನು ಆಚರಣೆ ಮಾಡುವ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ನೀಡೋಣ ಎಂದು ಅಣುವ್ರತ್ ಸಮಿತಿಯ ಅಧ್ಯಕ್ಷೆ ಮಂಜುಳಾ ಬನ್ಸಾಲಿ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ದೀಪಾವಳಿ ಹಬ್ಬ ಸಮೀಪಿಸುತ್ತಿರುವುದರಿಂದ ಪಟಾಕಿಗಳನ್ನ ಹೊಡೆಯುವವರ ಪ್ರಮಾಣ ಕೂಡ ಹೆಚ್ಚಾಗುತ್ತದೆ. ಹೆಚ್ಚಾಗಿ ಪಟಾಕಿಯನ್ನು ಬಳಸುವುದರಿಂದ ಪರಿಸರದ ವಾತಾವರಣದ ಮೇಲೆ ಪರಿಣಾಮ ಬೀರುತ್ತದೆ. ಪಟಾಕಿಯನ್ನು ಬಳಸುವುದನ್ನ ಕಡಿಮೆ ಮಾಡಬೇಕು. ಹೆಚ್ಚು ಪಟಾಕಿಗಳನ್ನು ಬಳಸುವುದರಿಂದ ಪರಿಸರ ಮಾಲಿನ್ಯವು ಹೆಚ್ಚಾಗುತ್ತದೆ ಅಷ್ಟೇ ಅಲ್ಲದೆ ಆರೋಗ್ಯದ ಮೇಲು ಪರಿಣಾಮ ಬೀರುತ್ತದೆ. ಹಣದ ದುರ್ಬಳಕೆ ಕೂಡ ಆಗುತ್ತದೆ ಇದರಿಂದ ಯಾವ ಅನುಕೂಲಗಳು ಇಲ್ಲ ಎಂದ ಅವರು ಇದನ್ನ ತಡೆಯುವ ನಿಟ್ಟಿನಲ್ಲಿ ಬಡ ಮಕ್ಕಳಿಗೆ ಪುಸ್ತಕವನ್ನು ನೀಡುವುದು, ಬಡವರಿಗೆ ಅನ್ನದಾನ ಮಾಡುವಂತಹ ಒಳ್ಳೆ ಕೆಲಸಗಳಿಗೆ ಪಟಾಕಿಗೆ ವ್ಯಯಿಸುವ ಹಣವನ್ನು ಬಳಸುವ ಮೂಲಕ ದೀಪಾವಳಿ ಹಬ್ಬವನ್ನ ವಿಭಿನ್ನವಾಗಿ ಆಚರಣೆ ಮಾಡಬಹುದು ಎಂದು ತಿಳಿಸಿದರು.
ಜಿಲ್ಲಾಡಳಿತದ ವತಿಯಿಂದ ಪರಿಸರ ಸ್ನೇಹಿ ಗಣೇಶ ಹಬ್ಬವನ್ನು ಆಚರಣೆ ಮಾಡಿದ್ದು, ಅದೇ ರೀತಿಯಲ್ಲಿ ದೀಪಾವಳಿ ಹಬ್ಬವನ್ನು ಸಹ ಆಚರಣೆ ಮಾಡಬೇಕು. ಪ್ಲಾಸ್ಟಿಕ್ ಮುಕ್ತ ಪರಿಸವನ್ನು ನಿರ್ಮಾಣ ಮಾಡಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಅಣುವ್ರತ್ ಸಮಿತಿಯ ಕಾರ್ಯಕಾರಣಿ  ಸದಸ್ಯರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!