ಕಾಫಿನಾಡಿನಲ್ಲಿ ವರುಣನ ಅಬ್ಬರ..!
1 min readಚಿಕ್ಕಮಗಳೂರು : ಮಲೆನಾಡು ಭಾಗದಲ್ಲಿ ವರುಣನ ಅಬ್ಬರ ಇಂದು ಜೋರಾಗಿಯೇ ಇದೆ.. ಕಳೆದ ಒಂದು ತಿಂಗಳಿನಿಂದ ಸುರಿಯುತ್ತಿರುವ ಮಳೆ ಒಂದು ವಾರದಿಂದ ಕೊಂಚ ಬಿಡುವು ನೀಡಿತ್ತು.. ಆದ್ರೆ ಇಂದು ಚಿಕ್ಕಮಗಳೂರು ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿಯೇ ಇದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕಳಸ, ಕೊಪ್ಪ, ಶೃಂಗೇರಿ, ಎನ್.ಆರ್ ಪುರ ತಾಲೂಕಿನಲ್ಲಿ ಭಾರೀ ಮಳೆಯಾಗಿದ್ದು. ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ, ದತ್ತಪೀಠ ಸುತ್ತಮುತ್ತಲೂ ಮಳೆ ಬಿಟ್ಟು ಬಿಡದೆ ಸುರಿಯುತ್ತಿದೆ.
ಅಲ್ಲದೆ… ಕಳಸ ದಿಂದ ಹೊರನಾಡು ಮಾರ್ಗದ ಹೆಬ್ಬಾಳ್ ಸೇತುವೆ ಭರ್ತಿಯಾಗಲು ಮೂರು ಅಡಿ ಮಾತ್ರ ಉಳಿದೆ. ಮೂಡಿಗೆರೆ ತಾಲೂಕಿನ ಗೌಡಳ್ಳಿಯಲ್ಲಿ ಹೇಮಾವತಿ ನದಿ ಸೇತುವೆ ಮಟ್ಟದಲ್ಲಿ ಹರಿಯುತ್ತಿದ್ದು.. ಜಿಲ್ಲೆಯಲ್ಲಿ ತುಂಗಾ, ಭದ್ರಾ ನದಿಗಳು ಮೈದುಂಬಿ ಹರಿಯುತ್ತಿವೆ.
ಕಾಫಿನಾಡು ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮಲೆನಾಡು ಭಾಗದ ಜನ ಜೀವನ ಅಸ್ತವ್ಯಸ್ತವಾಗಿದೆ.. ಅಲ್ಲದೆ ಮಳೆಯ ನರ್ತನಕ್ಕೆ ಕೆಲವೆಡೆ ಮರಗಳು ಧರೆಗುರುಳಿದ್ದು ಕೆಲ ತಾಲೂಕಿನಲ್ಲಿ ವಿದ್ಯುತ್ ಕಣ್ಣಮುಚ್ಚಾಲೆ ಆಡುತ್ತಿದೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g