April 29, 2024

MALNAD TV

HEART OF COFFEE CITY

ಲೋಕಸಭಾ ಚುನಾವಣೆ: ಕೆಆರ್‌ಎಸ್‌ ಪಕ್ಷದಿಂದ ಸ್ಪರ್ಧಿಸಲು ಮುಕ್ತ ಅವಕಾಶ

1 min read

ಚಿಕ್ಕಮಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೆಆರ್‌ಎಸ್‌ ಪಕ್ಷದಿಂದ ಯಾರಾದರೂ ಸ್ಪರ್ಧಿಸಲು ಇಚ್ಛೆ ಪಟ್ಟರೆ ಸ್ಪರ್ಧಿಸಲು ಅವಕಾಶ ನೀಡಲಾಗುವುದು ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಶ್ರೀನಿವಾಸ ಶಾಸ್ತ್ರಿ ತಿಳಿಸಿದರು.

ನಗರದ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಮ್ಮ ಕೆಆರ್‌ಎಸ್‌ ಪಕ್ಷವು ರಾಜ್ಯದ ಎಲ್ಲಾ ಕ್ಷೇತ್ರಗಳಿಂದಲೂ ಸ್ಪರ್ಧಿಸಲು ಇಚ್ಛೆ ಪಟ್ಟಿದೆ. ಜಿಲ್ಲೆಯಲ್ಲಿ ಯಾರಾದರೂ ಆಕಾಂಕ್ಷಿಗಳಿದ್ದರೆ ಪಕ್ಷದ ವತಿಯಿಂದ ಸ್ಪರ್ಧಿಸಲು ಮುಕ್ತವಾಗಿ ಅವಕಾಶ ನೀಡಲಾಗುವುದು ಎಂದ ಅವರು ಆಕಾಂಕ್ಷಿಗಳು ನನ್ನ ದೂರವಾಣಿ ಸಂಖ್ಯೆಯ 9665521665 ಮೂಲಕ ಸಂಪರ್ಕಿಸಬಹುದು ಎಂದರು.
ಇಚ್ಚಿಸುವ ಅಭ್ಯರ್ಥಿ ಪ್ರತಿ ತಿಂಗಳು ನಡೆಯುವ ಸಂದರ್ಶನದಲ್ಲಿ ಅವರು ಭಾಗವಹಿಸಿ, ಆಯ್ಕೆಯ ನಂತರ ಅವರು ಚುನಾವಣೆಯಲ್ಲಿ ಸ್ಪರ್ಧಿಸಬಹುದು. ಅಷ್ಟೇ ಅಲ್ಲದೆ ಕೆ ಆರ್ ಎಸ್ ಪಕ್ಷದ ವತಿಯಿಂದ ಸ್ವಾಮಿ ವಿವೇಕಾನಂದ ಅವರ ಹುಟ್ಟುಹಬ್ಬದ ಪ್ರಯುಕ್ತವಾಗಿ ಯುವ ಸಮಾವೇಶವನ್ನು ಜನವರಿ 12ನೇ ತಾರೀಕು ಕೊಪ್ಪಳದಲ್ಲಿ ಹಮ್ಮಿಕೊಳ್ಳಲಾಗಿದ್ದು, ಇಲ್ಲ ಸಾರ್ವಜನಿಕರು ಈ ಯುವ ಸಮಾವೇಶಕ್ಕೆ ಭಾಗವಹಿಸಿ ಕಾರ್ಯಕ್ರಮವನ್ನು ಬಲಗೊಳಿಸಬೇಕು ಎಂದು ಮನವಿ ಮಾಡಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!