ಶಾಸಕ ಸಿ.ಟಿ. ರವಿ ಸಿಎಂ ಆಗಲೆಂದು ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ
1 min readಚಿಕ್ಕಮಗಳೂರು : ಶಾಸಕ ಸಿ.ಟಿ ರವಿ ಅವರು ಸಿಎಂ ಆಗಲೆಂದು ಎಂದು ಬಿಜೆಪಿ ಕಾರ್ಯಕರ್ತರು ನಗರದ ಗಣಪತಿ ದೇವಸ್ಥಾನದಲ್ಲಿ ಹೋಮ ಹಾಗೂ ವಿಶೇಷ ಪೂಜೆ ಸಲ್ಲಿಸಿದರು.
ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆಗೆ ವಿಚಾರ ಕುರಿತು ದೊಡ್ಡ ಬೆಳವಣಿಗೆ ಕಾಣುತ್ತಿದೆ. ಈ ಹಿನ್ನೆಲೆ ಚಿಕ್ಕಮಗಳೂರು ಶಾಸಕ ಸಿ.ಟಿ. ರವಿ ಅವರು ರಾಜ್ಯದ ಮುಖ್ಯಮಂತ್ರಿಯಾಗಲಿ ಎಂದು ಚಿಕ್ಕಮಗಳೂರು ಬಿಜೆಪಿ ಪಕ್ಷದ ಕಾರ್ಯತರು ಸಂಕಷ್ಟ ಚತುರ್ಥಿ ದಿನದಂದು ಸಿ.ಟಿ.ರವಿಗಾಗಿ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಚಿಕ್ಕಮಗಳೂರು ನಗರದ ಗಣಪತಿ ದೇವಸ್ಥಾನದಲ್ಲಿ ಸಂಕಷ್ಟ ಚತುರ್ಥಿ ದಿನದಂದು ಸಿ.ಟಿ.ರವಿಗಾಗಿ ವಿಶೇಷ ಪೂಜೆ ಸಲ್ಲಿಸಿ ಹೋಮದ ಪೂರ್ಣಾಹುತಿಯಲ್ಲಿ ಸಿ.ಟಿ.ರವಿ ಸಿಎಂ ಆಗಲೆಂದು ಸಂಕಲ್ಪ ಮಾಡಿದರು
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g