May 19, 2024

MALNAD TV

HEART OF COFFEE CITY

ಎಂ.ಎಲ್.ಎ. ಚುನಾವಣೆಗೆ ನಾವೇ ಟಿಕೆಟ್ ಕೇಳೋಣ, ಮುಸ್ಲಿಂ ಮುಖಂಡರ ಗೌಪ್ಯ ಸಭೆ

1 min read

ವಿಧಾನಸಭಾ ಚುನಾವಣೆಗೆ ಮರ‍್ನಾಲ್ಕು ತಿಂಗಳು ಬಾಕಿ ಇರುವಾಗಲೇ ಟಿಕೆಟ್‌ಗಾಗಿ ಭಾರೀ ಪೈಪೋಟಿ ನಡೆಯುತ್ತಿದ್ದು ಚಿಕ್ಕಮಗಳೂರು ತಾಲೂಕಿನ ಕಾಂಗ್ರೆಸ್ ಟಿಕೆಟನ್ನ ಮುಸ್ಲಿಮರಿಗೆ ನೀಡುವಂತೆ ಒತ್ತಾಯ ಮಾಡಬೇಕೆಂದು ಮುಸ್ಲಿಮರು ಸಭೆ ಸೇರಿ ತೀರ್ಮಾನಿಸಿದ್ದಾರೆ. ಚಿಕ್ಕಮಗಳೂರು ನಗರದ ಪುರ್ಖಾನಿಯಾ ಶಾದಿಮಹಲ್‌ನಲ್ಲಿ ಸಭೆ ಸೇರಿದ್ದ ಸುಮಾರು ೧೫೦ಕ್ಕೂ ಹೆಚ್ಚು ಮುಸ್ಲಿಂ ಮುಖಂಡರು, ಗುರುಗಳು ಹಾಗೂ ಸಂಘಟನೆಯ ಮುಖಂಡರು ಸಭೆ ಸೇರಿ ತೀರ್ಮಾನಿಸಿದ್ದಾರೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮುಸ್ಲಿಮರಿಗೆ ಟಿಕೆಟ್ ಕೇಳಬೇಕೆಂದು ಸಭೆಯಲ್ಲಿ ಎಲ್ಲರೂ ತಿರ್ಮಾನಿಸಿದ್ದಾರೆ. ಈ ಬಾರಿ ಮುಸ್ಲಿಮರಿಗೆ ಟಿಕೆಟ್ ನೀಡಬೇಕೆಂದು ಪಕ್ಷದ ವರಿಷ್ಠರನ್ನ ಭೇಟಿ ಮಾಡಿ, ಅವರ ಬಳಿಯೂ ಟಿಕೆಟ್ ಕೇಳಬೇಕೆಂದು ತೀರ್ಮಾನಿಸಿದ್ದಾರೆ. ಈಗಾಗಲೇ ಕುರುಬ ಹಾಗೂ ಲಿಂಗಾಯುತ ಸಮುದಾಯಕ್ಕೆ ಸೇರಿದ ಹಲವರು ನನಗೆ ಟಿಕೆಟ್ ಎಂದು ಹೇಳುತ್ತಿದ್ದಾರೆ. ಆದರೆ, ಈ ಮಧ್ಯೆ ಮುಸ್ಲಿಮರು ಟಿಕೆಟ್‌ಗೆ ಬೇಡಿಕೆ ಇಟ್ಟಿರುವುದು ಟಿಕೆಟ್ ಫೈಟ್ ಮತ್ತಷ್ಟು ರೋಚಕವಾಗುವುದರಲ್ಲಿ ಸಂದೇಹವಿಲ್ಲದoತಾಗಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!