ಅ.28 ರಂದು ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ “ಖೋಖೋ” ಪಂದ್ಯಾವಳಿ
1 min readಚಿಕ್ಕಮಗಳೂರು: ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅ.28 ರಂದು ನಗರದ ಕುವೆಂಪು ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಹರ್ಷಿ ವಾಲ್ಮೀಕಿ ಯುವಕರ ಸಂಘದ ಜಿಲ್ಲಾಧ್ಯಕ್ಷ ಜಗದೀಶ್ ಕೋಟೆ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಲ್ಮೀಕಿ ಜಯಂತಿ ಅಂಗವಾಗಿ ತಾಲೂಕು ಕಚೇರಿಯಿಂದ ಎಂ. ಜಿ ರಸ್ತೆಯ ಮಾರ್ಗವಾಗಿ ಕುವೆಂಪು ಕಲಾಮಂದಿರದವರೆಗೆ ವಿವಿಧ ಕಲಾತಂಡಗಳೊಂದಿಗೆ ಮೆರವಣಿಗೆ ನಡೆಯಲಿದೆ. ಕುವೆಂಪು ಕಾಲಮಂದಿರದಲ್ಲಿ ಬಳಿಕ 11 ಗಂಟೆಗೆ ವೇದಿಕೆ ಕಾರ್ಯಕ್ರಮ ಮತ್ತು ಬಹುಮಾನ ವಿತರಣೆ ಕಾರ್ಯಕ್ರಮವನ್ನು ಸಹ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಮಹರ್ಷಿ ವಾಲ್ಮೀಕಿ ಗುರುಗಳ ಸ್ಮರಣಾರ್ಥವಾಗಿ ಮಹರ್ಷಿ ವಾಲ್ಮೀಕಿ ಯುವಕರ ಸಂಘ ಮತ್ತು ಹೊಯ್ಸಳ ಸ್ಪೋರ್ಟ್ಸ್ ಕ್ಲಬ್ ಇವರ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 27 ರಂದು ‘ಮಹರ್ಷಿ ವಾಲ್ಮೀಕಿ ಕಪ್ -2023’ ಎಂಬ ಶೀರ್ಷಿಕೆಯಡಿಯಲ್ಲಿ ದೇಸಿ ಕ್ರೀಡೆಯಾದ ಖೋಖೋ ಪಂದ್ಯಾವಳಿಯನ್ನು ಆಯೋಜಿಸಲಾಗಿದ್ದು, ಕ್ರೀಡೆಯಲ್ಲಿ ಭಾಗವಹಿಸುವಂತಹ ಕ್ರೀಡಾಪಟುಗಳು ನೋಂದಣಿ ಮಾಡಿಕೊಳ್ಳಬೇಕು ಎಂದು ಹೇಳಿದರು.
ಮಹರ್ಷಿ ವಾಲ್ಮೀಕಿ ಜಯಂತಿಗೆ ಸಮಾಜದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ದಲಿತರ ಸಂಘಟನೆಗಳು ಸೇರಿದಂತೆ ಎಲ್ಲಾ ನಾಗರಿಕರು ಭಾಗವಹಿಸಿ ಜಯಂತಿಯನ್ನು ಯಶಸ್ವಿಗೊಳಿಸಬೇಕು ಎಂದರು. ಈ ಸಂದರ್ಭದಲ್ಲಿ ಮಹರ್ಷಿ ವಾಲ್ಮೀಕಿ ಯುವಕರ ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್ ಎಂ ಮಧುಕುಮಾರ್, ಗೌರವ ಸಲಹೆಗಾರರು ಬಿ.ಟಿ ಕುಮಾರ್ ನಾಯಕ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g