ಮಹೇಶ್ ಉಚ್ಚಾಟನೆಗೆ ಒತ್ತಾಯ
1 min readಚಿಕ್ಕಮಗಳೂರು: ನಗರಸಭೆ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದ ರೈತ ಮೋರ್ಚಾದ ಜಿಲ್ಲಾ ಕಾರ್ಯದರ್ಶಿ ಕೆ.ಬಿ.ಮಹೇಶ್ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡುವಂತೆ ಆಗ್ರಹಿಸಿ 35ನೇ ವಾರ್ಡ್ನ ಬಿಜೆಪಿ ಕಾರ್ಯಕರ್ತರು ಜಿಲ್ಲಾಧ್ಯಕ್ಷ ಹೆಚ್.ಸಿ.ಕಲ್ಮರುಡಪ್ಪ ಅವರಿಗೆ ಮನವಿ ಸಲ್ಲಿಸಿದರು.
ನಗರಸಭೆ ಚುನಾವಣೆಯಲ್ಲಿ 35 ನೇ ವಾರ್ಡ್ನಿಂದ ಬಿಜೆಪಿಯಿಂದ ಅಧಿಕೃತ ಅಭ್ಯರ್ಥಿ ಲಲಿತಾ ಬಾಯಿ ಸ್ಪರ್ಧಿಸಿದ್ದರು. ಬಿಜೆಪಿ ರೈತ ಮೋರ್ಚಾದ ಜಿಲ್ಲಾ ಕಾರ್ಯದರ್ಶಿ ಕೆ.ಬಿ.ಮಹೇಶ್ ಪಕ್ಷದ ವಿರುದ್ದವಾಗಿ ಪಕ್ಷೇತರ ಅಭ್ಯರ್ಥಿಯ ಪರವಾಗಿ ಮತಯಾಚನೆಯಲ್ಲಿ ತೊಡಗಿಕೊಂಡಿದ್ದು. ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವ ಇವರನ್ನು ಪಕ್ಷದಿಂದ ಉಚ್ಚಾಟನೆಗೊಳಿಸುವಂತೆ ಒತ್ತಾಯಿಸಿದರು.
ನಗರಸಭೆ ವಾರ್ಡ್ 35ರ ನೂತನ ಸದಸ್ಯೆ ಲಲಿತಾಬಾಯಿ, ಬಿಜೆಪಿ ಕಾರ್ಯಕರ್ತರಾದ ಕೆ.ಕೆ. ಮಹೇಶ್, ಮರಿಯಪ್ಪ, ಕಲ್ಲೇಶ್, ಮಂಜೇಗೌಡ, ಶ್ರೀಕಾಂತ್, ಪುಷ್ಪಲತಾ, ಮಧು, ರವಿನಾಯ್ಕ್, ಕುಮಾರಸ್ವಾಮಿ, ರಾಜ್ಕುಮಾರ್ ಇದ್ದರು
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g