ಕನ್ನಡ ಸಾಹಿತ್ಯ ಪರಿಷತ್ ಸೇವಾಕಾಂಕ್ಷಿಯಾಗಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮಹೇಶ್ ಜೋಷಿ ಸ್ಪರ್ಧೆ
1 min readಚಿಕ್ಕಮಗಳೂರು : ಮೇ 9 ರಂದು ಕನ್ನಡ ಸಾಹಿತ್ಯ ಪರಿಷತ್ಗೆ ರಾಜ್ಯಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಈ ಚುನಾವಣೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅಭ್ಯರ್ಥಿಯಾಗಿ ನಿಂತಿರುವ ನನಗೆ ಮತ ನೀಡುವ ಮೂಲಕ ಕನ್ನಡದ ಸೇವೆ ಮಾಡಲು ಅವಕಾಶ ನೀಡಬೇಕೆಂದು ನಾಡೋಜ ಪ್ರಶಸ್ತಿ ಪುರಸ್ಕೃತ ಹಾಗೂ ಚಂದನ ವಾಹಿನಿಯ ಮಾಜಿ ನಿರ್ದೇಶಕ ಮಹೇಶ್ ಜೋಷಿ ಹೇಳಿದ್ರು.
ಅವರು ಸುದ್ದಿಗೋಷ್ಠಿಯ ನಂತರ ನಿಮ್ಮ ಮಲ್ನಾಡ್ ಟಿ.ವಿಯೊಂದಿಗೆ ಮಾತನಾಡುತ್ತ ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಏಕೈಕ ಪ್ರಾತಿನಿಧಿಕ ಸಂಸ್ಥೆಯಾಗಿದೆ. ಇಂತಹ ಪರಿಷತ್ನ ರಾಜ್ಯಾಧ್ಯಕ್ಷ ಸ್ಥಾನದ ಸೇವಾಕಾಂಕ್ಷಿಯಾಗಿ ನಾನು ನಿಂತಿದ್ದು, ಕನ್ನಡ ಸಾಹಿತ್ಯ ಪರಿಷತ್ ಕನ್ನಡ ನಾಡು, ನುಡಿ, ನೆಲ, ವಿಷಯ ಬಂದಾಗ ಮುಂಚುಣಿಯಲ್ಲಿ ನಿಲ್ಲಬೇಕು. ನಾನು ಈಗಾಗಲೇ ದೂರದರ್ಶನದಲ್ಲಿ ಕೆಲಸ ಮಾಡಿ ಕನ್ನಡಿಗರ ಮನೆ ಮನಗಳಿಗೆ ತಲುಪಿಸುವ ಕೆಲಸ ಮಾಡಿದ್ದೇನೆ. ಕನ್ನಡ ಸಾಹಿತ್ಯ ಪರಿಷತ್ತನ್ನು ಮುಂದಿನ ದಿನಗಳಲ್ಲಿ ಜನ ಪರ ಪರಿಷತ್ ಮಾಡುತ್ತೇನೆ ಎಂದು ಹೇಳಿದ್ರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g