May 17, 2024

MALNAD TV

HEART OF COFFEE CITY

ಮಹಿಷಾ ದಸರಾ ಆಚರಣೆ; ಕಾರ್ಯಕರ್ತರ ಬಂಧನ

1 min read

ಚಿಕ್ಕಮಗಳೂರು: ಕಾಫಿನಾಡಲ್ಲಿ ನಿಷೇಧಾಜ್ಞೆ ನಡುವೆಯೂ ಮಹಿಷಾ ದಸರಾ ಆಚರಣೆ ಮಾಡಲು ಮುಂದಾದ ದಲಿತ ಸಂಘಟನೆ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.
ಕೆಲವು ದಲಿತ ಸಂಘಟನೆಗಳು ಕರೆ ನೀಡಿದ್ದ ಮಹಿಷಾ ದಸರಾ ಆಚರಣೆಗೆ ಸಾರ್ವಜನಿಕ ವಲಯದಲ್ಲಿ ಭಾರಿ ವಿರೋಧ ವ್ಯಕ್ತವಾಗಿತ್ತು. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತವು 6 ದಿನಗಳ ವರೆಗೆ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೆ ಆದೇಶ ನೀಡಿತ್ತು. ನಿಷೇದಾಜ್ಞೆ ಮತ್ತು ಸಮಾಜದ ವಿರೋಧದ ನಡುವೆಯೂ ಮಹಿಷಾಸುರರ ಭಾವಚಿತ್ರ ಪ್ರದರ್ಶನ ಮಾಡುವುದರ ಮೂಲಕ ಸಮಾಜದ ಸ್ವಾಸ್ಥ್ಯ ಹಾಳು ಮಾಡಲು ಮುಂದಾದ ಬೆರಳೆಣಿಕೆಯಷ್ಟು ಕಾರ್ಯಕರ್ತರನ್ನು ನಗರದ ಹನುಮಂತಪ್ಪ ವೃತ್ತದಲ್ಲಿ ಪೊಲೀಸರು ತಡೆದರು. ಈ ವೇಳೆ ಕಾರ್ಯಕರ್ತರ ನಡುವೆ ಮತ್ತು ಪೊಲೀಸರ ನಡುವೆ ಮಾತನ ಚಕಮಕಿ ನಡೆಯಿತು. ಮುಂಜಾಗ್ರತಾ ಕ್ರಮವಾಗಿ ಪೊಲೀಸರ ಜೊತೆ ವಾಗ್ವಾದ ಇಳಿದ 60 ಕ್ಕೂ ಹೆಚ್ಚು ದಲಿತಪರ ಸಂಘಟನೆ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ, ಬಂಧಿತರನ್ನ ಕಡೂರು ಠಾಣೆಗೆ ಕರೆದೊಯ್ದದರು. ಇದೇ ವೇಳೆ ಕಾರ್ಯಕರ್ತರು ಸರ್ಕಾರ ಹಾಗೂ ಜಿಲ್ಲಾಡಳಿತ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!