ಕಾಂಗ್ರೆಸ್ ಕೊಳೆತ ಮಾವು: ಕೆ.ಎಸ್ ಈಶ್ವರಪ್ಪ
1 min read
ಚಿಕ್ಕಮಗಳೂರು : ಕಾಂಗ್ರೆಸ್ ಒಂದು ಕೊಳೆತ ಮಾವಿನಹಣ್ಣು, ಅಲ್ಲಿಗೆ ಯಾರು ಹೋಗ್ತಾರೆ ಎಂದು ಸಚಿವ ಈಶ್ವರಪ್ಪ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.
ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ಶಾಸಕರು, ಸಚಿವರು ಸಂಪರ್ಕದಲ್ಲಿದ್ದಾರೆಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಕೊಳೆತು ನಾರುತ್ತಿದೆ ಎಂದು ಲೇವಡಿ ಮಾಡಿದರು.
ಬಿಜೆಪಿ, ಹಾಗೂ ಮೋದಿಯಂತಹ ಸೇಬು ಹಣ್ಣನ್ನು ಬಿಟ್ಟು ಕೊಳೆತ ಮಾವಿನ ಹಣ್ಣಿನ ಹತ್ತಿರ ಬಿಜೆಪಿಯ ಯಾವೊಬ್ಬ ಶಾಸಕ ಸಿಂಹಗಳು ಸಹ ಹೋಗುವುದಿಲ್ಲ ಎಂದ ಅವರು ಕಾಂಗ್ರೆಸ್ ಪಕ್ಷಕ್ಕೆ ಡಿಮ್ಯಾಂಡ್ ಕ್ರಿಯೇಟ್ ಮಾಡೋಕೆ ಈ ಆಟ ಆಡುತ್ತಿದ್ದಾರೆ ಎಂದು ಟಾಂಗ್ ಕೊಟ್ಟರು
ಮುಖ್ಯಮಂತ್ರಿ ಸ್ಥಾನ, ಸರ್ಕಾರ
ಕಳೆದುಕೊಂಡರು ಸಹ ಈಗಲೂ ಮಾನ ಮರ್ಯಾದೆ ಇಲ್ಲದೆ ಈ ರೀತಿ ಮಾತನಾಡುತ್ತಿದ್ದಾರೆ. ನರೇಂದ್ರ ಮೋದಿಯಂಥ ನಾಯಕ ಕಾಂಗ್ರೆಸ್ ನಲ್ಲಿ, ಜೆಡಿಎಸ್ ನಲ್ಲಿ ಸಿಕ್ತಾರಾ ಎಂದು ಪ್ರಶ್ನಿಸಿದ ಅವರು ನಮ್ಮತ್ರ ಬೈಸಿಕೊಳ್ಳೋಕೆ ಈ ರೀತಿ ಮಾತುಗಳನ್ನು ಸಿದ್ದರಾಮಯ್ಯ ಆಡ್ತಾರೆ. ನಾನು ಬದುಕಿದ್ದೇನೆ, ಜೀವಂತವಿದ್ದೀನಿ ಅಂತಹ ತೋರಿಸಿಕೊಳ್ಳೋಕೆ ಈ ರೀತಿ ಮಾತಾಡ್ತಾರೆ ಎಂದು ವ್ಯಂಗ್ಯವಾಡಿದ ಅವರು ಬಿಜೆಪಿಯ ಯಾವೊಬ್ಬ ಶಾಸಕ ಸಿಂಹಗಳು ಸಹ ಕಾಂಗ್ರೆಸ್ ಕಡೆ ತಿರುಗಿಯೂ ನೋಡುವುದಿಲ್ಲ ಎಂದು ತಿರುಗೇಟು ನೀಡಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g