ಆರೋಗ್ಯ ಇಲಾಖೆಯ ಜಲಜಾಕ್ಷಿಗೆ “ಮಲೆನಾಡು ಮಾತೆ” ರಾಜ್ಯಮಟ್ಟದ ಪ್ರಶಸ್ತಿ
1 min read
ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಯಾದ ಶ್ರೀಮತಿ ಜಲಜಾಕ್ಷಿ ಅವರಿಗೆ ರಚಿತಾ ಮಹಿಳಾ ಸಮಾಜದ ಬೆಳ್ಳಿ ಹಬ್ಬ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಪ್ರಶಸ್ತಿ ನೀಡಿ ಗೌರವಿಸಿದೆ. ಆರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಇವರು ಕುದುರೆಮುಖದ ಅತ್ಯಂತ ದುರ್ಗಮ ಪ್ರದೇಶದಲ್ಲೂ ಸೇವೆ ಸಲ್ಲಿಸಿದ್ದಕ್ಕೆ ಕುದುರೆಮುಖ ಲಯನ್ಸ್ ಕ್ಲಬ್ ವರ್ಷದ ಮಹಿಳೆ ಪ್ರಶಸ್ತಿ ನೀಡಿ ಗೌರವಿಸಿದೆ.
ಇದರ ಜೊತೆ, ಹಲವು ಕಾರ್ಯಕ್ರಮಗಳಲ್ಲಿ ಅತ್ಯಂತ ಶುದ್ಧ ಹಾಗೂ ಸ್ಪಷ್ಟ ಕನ್ನಡದಲ್ಲಿ ಕಾರ್ಯಕ್ರಮ ನಡೆಸಿ ಕೊಡುತ್ತಾರೆ. ಮಲ್ನಾಡ್ ಟಿವಿಯಲ್ಲಿ ವೈದ್ಯರ ಜೊತೆ ಆರೋಗ್ಯದ ಬಗೆಗಿನ ಕಾರ್ಯಕ್ರಮದಲ್ಲೂ ನಿರೂಪಕಿಯಾಗಿ ಸಂದರ್ಶಕರಾಗಿದ್ದಾರೆ. ಹಲವು ಸಂಘ-ಸಂಸ್ಥೆಗಳಲ್ಲಿ ಸಕ್ರಿಯರಾಗಿರೋ ಇವರಿಗೆ ರಚಿತಾ ಮಹಿಳಾ ಸಮಾಜ ಬೆಳ್ಳಿ ಹಬ್ಬದ ಕಾರ್ಯಕ್ರಮದಲ್ಲಿ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿದೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g