May 8, 2024

MALNAD TV

HEART OF COFFEE CITY

ಅಮೃತ್ ಯೋಜನೆ ಹೆಸರಲ್ಲಿ ಅಗೆದ ರಸ್ತೆಗಳ ಶೀಘ್ರ ದುರಸ್ಥಿಗೊಳಿಸುವಂತೆ ಒತ್ತಾಯ

1 min read

ಚಿಕ್ಕಮಗಳೂರು-ನಗರದಲ್ಲಿ ಅಮೃತ್ ಯೋಜನಾ ಕಾಮಗಾರಿ ಹೆಸರಲ್ಲಿ ಅಗೆದಿರುವ ರಸ್ತೆಗಳನ್ನು ಶೀಘ್ರವಾಗಿ ದುರಸ್ಥಿಗೊಳಿಸದ್ದಿದ್ದಲ್ಲಿ ನಗರದಲ್ಲಿ ಪ್ರತಿಭಟನೆ ನಡೆಸುವುದಾಗಿ ಕೆಪಿಸಿಸಿ ಕಿಸಾನ್ ಖೇತ್ ಮಜ್ದೂರ್‍ನ ರಾಜ್ಯ ಸಂಚಾಲಕ ಸಿ.ಎನ್.ಅಕ್ಮಲ್ ಎಚ್ಚರಿಸಿದರು.
ಅಮೃತ್ ಯೋಜನೆ ಕಾಮಗಾರಿ ಹೆಸರಲ್ಲಿ ಅಗೆದಿರುವ ರಸ್ತೆಗಳನ್ನು ದುರಸ್ಥಿಗೊಳಿಸುವಂತೆ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಉಪನಿರ್ದೇಶಕರಿಗೆ ಮನವಿ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಚಿಕ್ಕಮಗಳೂರು ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಅಮೃತ್ ಯೋಜನೆ ಕಾಮಗಾರಿ ಆರಂಭಗೊಂಡು ದಶಕಗಳೇ ಕಳೆದರೂ ಇಂದಿಗೂ ಕಾಮಗಾರಿ ಅಪೂರ್ಣವಾಗಿದೆ. ಯೋಜನೆ ಹೆಸರಲ್ಲಿ ಕೋಟ್ಯಾಂತರ ಹಣದ ದುರುಪಯೋಗವಾಗಿದೆ. ನೀರಿನ ಸಂಪರ್ಕಕ್ಕೆ ಅಳವಡಿಸಿರುವ ಪೈಪ್, ಸಿಮೆಂಟ್ ಸೇರಿದಂತೆ ಕಳಪೆ ವಸ್ತುಗಳನ್ನು ಕಾಮಗಾರಿಗೆ ಬಳಕೆ ಮಾಡಿಕೊಳ್ಳಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಹಾಗೂ ಪೌರಾಯುಕ್ತರು ಗಮನಹರಿಸುತ್ತಿಲ್ಲ ಎಂದು ದೂಷಿಸಿದರು.

ಇನ್ನು ಅಮೃತ್ ಯೋಜನೆ ಹೆಸರಲ್ಲಿ ಅಗೆದ ಗುಂಡಿಗಳನ್ನು ಸಂಪೂರ್ಣವಾಗಿ ಮುಚ್ಚದ ಕಾರಣ ಸಾರ್ವಜನಿಕರು ಹಾಗೂ ವಾಹನ ಸಂಚಾರಕ್ಕೆ ತೊಂದರೆ ಎದುರಾಗಿ ಅಪಘಾತಕ್ಕೆ ಕಾರಣವಾಗಲಿದೆ. ಕಾಮಗಾರಿ ನಡೆಸುವ ಗುತ್ತಿಗೆದಾರರು ಬೇಕಾಬಿಟ್ಟಿಯಾಗಿ ಸಾರ್ವಜನಿಕ ರಸ್ತೆ ಗುಂಡಿಗಳನ್ನು ಅಗೆದು ಮುಚ್ಚದೇ ಬೇಜವಾಬ್ದಾರಿ ತೋರಿದ್ದಾರೆ. ಮುಂದಿನ ದಿನಗಳಲ್ಲಿ ಅಗೆದಿರುವ ರಸ್ತೆ ಗುಂಡಿಗಳನ್ನು ಮುಚ್ಚದೇ ಹೋದಲ್ಲಿ ಕಛೇರಿ ಎದುರು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.
ಈ ವೇಳೆ ಕಿಸಾನ್ ನಗರ ಅಧ್ಯಕ್ಷ ಸಯ್ಯದ್ ಜಬೀ, ಅಜ್ಮಲ್, ರಿಜ್ವಾನ್, ವಾರಿಸ್, ಬಾಬರ್, ಮಜರ್, ಜಹೀರುಲ್ಲಾ, ಎಜಾಜ್ ಸೇರಿದಂತೆ ಮತ್ತಿತರು ಇದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!