ಪ್ರಾರ್ಥನಾ ಸ್ಥಳಗಳಿಗೆ ಭದ್ರತೆ ನೀಡುವಂತೆ ಮನವಿ
1 min readಚಿಕ್ಕಮಗಳೂರು: ಕೆಲವೊಂದು ಸಂಘಟನೆಗಳು ಧಾರ್ಮಿಕ ಆಚರಣೆಗೆ ಅಡ್ಡಿಪಡಿಸಿ ಭಾವನೆ ಗಳಿಗೆ ಧಕ್ಕೆ ಉಂಟು ಮಾಡುತ್ತಿರುವ ಹಿನ್ನಲೆ ಜಿಲ್ಲೆಯ ಕ್ರೈಸ್ತ ಸಮುದಾಯದ ಪ್ರಾರ್ಥನಾ ಸ್ಥಳಗಳಿಗೆ ಭದ್ರತೆ ನೀಡುವಂತೆ ಕ್ರಿಶ್ಚಿಯನ್ ಚರ್ಚ್ ಅಸೋಶಿಯೇಷನ್ ಹಾಗೂ ವಿವಿಧ ಸಂಘಟನೆಗಳ ಮುಖಂಡರು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಅವರಿಗೆ ಮನವಿ ಸಲ್ಲಿಸಿದರು.
ಈ ಸಂಬಂಧವಾಗಿ ಬುಧವಾರ ಕ್ರಿಶ್ಚಿಯನ್ ಚರ್ಚ್ ಅಸೋಶಿಯೇಷನ್ ಪದಾಧಿಕಾರಿಗಳು ಮನವಿ ಸಲ್ಲಿಸಿ, ಜಿಲ್ಲೆಯ ಕೆಲವೊಂದು ಕೋಮುವಾದಿ ಸಂಘಟನೆಗಳು ಕ್ರೈಸ್ತರ ಪ್ರಾರ್ಥನಾ ಸ್ಥಳಗಳಿಗೆ ಏಕಾಏಕಿ ನುಗ್ಗಿ ಅನಗತ್ಯವಾಗಿ ತೊಂದರೆ ನೀಡುವುದರ ಜೊತೆಗೆ ಧಾರ್ಮಿಕ ಆಚರಣೆಗಳಿಗೆ ಅಡ್ಡಿಪಡಿಸಿ, ಧಾರ್ಮಿಕ ಭಾವನೆಗಳಿಗೂ ಧಕ್ಕೆ ಯುಂಟು ಮಾಡಿವೆ. ಅಲ್ಲದೇ ಖಾಸಗಿ ಸಭಾಂಗಣ ಮತ್ತು ಮನೆಗಳಲ್ಲಿ ಪ್ರಾರ್ಥನೆ, ಆರಾಧನೆ ನಡೆಸದಂತೆ ಧಮಕಿ ಹಾಕಿವೆ. ಆ ನಿಟ್ಟಿನಲ್ಲಿ ಜಿಲ್ಲೆಯ ಕ್ರೈಸ್ತ ಸಮುದಾಯದ ಪ್ರಾರ್ಥನಾ ಸ್ಥಳಗಳಿಗೆ ಜಿಲ್ಲಾಳಿತ ಸೂಕ್ತ ಭದ್ರತೆ ಒದಗಿಸುವಂತೆ ಮನವಿ ಮಾಡಿದರು.
ಧಾರ್ಮಿಕವಾಗಿ ಪ್ರಾರ್ಥನೆ ಸಲ್ಲಿಸಲು ನಿಗಧಿತ ಸ್ವಂತ ಕಟ್ಟಡಗಳು ಇಲ್ಲದ ಕಾರಣ ಖಾಸಗಿ ಸಭಾಂಗಣ, ಮನೆಗಳಲ್ಲಿ ಸುಮಾರು 15-20 ವರ್ಷಗಳಿಂದ ಒಂದೇ ಸ್ಥಳದಲ್ಲಿ ಪ್ರಾರ್ಥನೆ ಮಾಡಿಕೊಂಡು ಬರಲಾಗುತ್ತಿದೆ. ಆದರೆ ಕೆಲವು ಸಂಘಟನೆಗಳು ಧಾರ್ಮಿಕ ಗುರುಗಳ ವಿರುದ್ದ ಸುಳ್ಳು ಕೇಸ್ ದಾಖಲಿಸಿ ಆತಂಕಕ್ಕೆ ದೂಡಿದೆ. ಈ ನಿಟ್ಟಿನಲ್ಲಿ ಸೂಕ್ತಭದ್ರತೆ ಒದಗಿ ಸುವಂತೆ ಕೇಳಿಕೊಂಡರು.
ಈ ಸಂದರ್ಭದಲ್ಲಿ ಬಿಎಸ್ಪಿ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ, ಕರವೇ ಜಿಲ್ಲಾಧ್ಯಕ್ಷ ತೇಗೂರು ಜಗದೀಶ್, ಸಿಸಿಎ ಅಧ್ಯಕ್ಷ ಸುಂದರ್ಬಾಬು, ಉಪಾಧ್ಯಕ್ಷ ರೂಬೆನ್, ಪ್ರಧಾನ ಕಾರ್ಯದರ್ಶಿ ರವಿ ಎಂಜಲೋಸ್, ಕ್ರಿಸ್ತ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಜೋಸೆಫ್, ಉಪಾಧ್ಯಕ್ಷ ಟಿ.ಆರ್.ಕಾರ್ತಿಕ್, ಪ್ರಧಾನ ಕಾರ್ಯದರ್ಶಿ ಎಚ್.ಎಸ್.ಪುನೀತ್ ಸೇರಿದಂತೆ ಅನೇಕರು ಇದ್ದರು.
8ಸಿಕೆಎಂ7
ಚಿಕ್ಕಮಗಳೂರು: ಕ್ರಿಶ್ಚಿಯನ್ ಚರ್ಚ್ ಅಸೋಶಿಯೇಷನ್ ಹಾಗೂ ವಿವಿಧ ಸಂಘಟನೆಗಳ ಮುಖಂಡರು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಅವರಿಗೆ ಮನವಿ ಸಲ್ಲಿಸಿದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g