ನಗರಸಭೆ ಅಧ್ಯಕ್ಷ ಸ್ಥಾನ ಅಧಿಕಾರ ಅಲ್ಲ ಜಾವಾಬ್ದಾರಿ_ ವರಸಿದ್ಧಿ
1 min read
ಚಿಕ್ಕಮಗಳೂರು: ನಗರಸಭೆಯ 77ನೇ ನೂತನ ಅಧ್ಯಕ್ಷರಾಗಿ ವರಸಿದ್ಧಿ ವೇಣುಗೋಪಾಲ್ ಆಯ್ಕೆಯಾಗಿ ಅಧಿಕಾರ ಸ್ವೀಕಾರ ಮಾಡಿದರು.ನಗರಸಭೆ ಸಭಾಂಗಣದಲ್ಲಿ ಶುಕ್ರವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷಸ್ಥಾನಕ್ಕೆ ವರಸಿದ್ದಿವೇಣುಗೋಪಾಲ್ ಮತ್ತು ಕಾಂಗ್ರೆಸ್ ಪಕ್ಷದ 12ನೇ ವಾರ್ಡಿನ ಸದಸ್ಯ ಸೈಯದ್ಜಾವಿದ್, ಉಪಾಧ್ಯಕ್ಷ ಸ್ಥಾನಕ್ಕೆ ಉಮಾದೇವಿ ಹಾಗೂ 34ನೇ ವಾರ್ಡಿನ ಸದಸ್ಯೆ ಕೆ.ಆರ್.ಮಂಜುಳಾ ನಾಮಪತ್ರ ಸಲ್ಲಿಸಿದ್ದರು.
ಅಧ್ಯಕ್ಷ ಮತ್ತು ಉಪಾಧ್ಯಕ್ಷಸ್ಥಾನಕ್ಕೆ ಸ್ಪರ್ಧಿಸಿದ್ದ ಬಿಜೆಪಿಯ ಸದಸ್ಯರು ತಲಾ 23 ಮತಗಳನ್ನು ಪಡೆದು ಆಯ್ಕೆಯಾದರೆ, ಕಾಂಗ್ರೆಸ್ ಪಕ್ಷದ ಸದಸ್ಯರು ತಲಾ 13 ಮತಗಳನ್ನು ಪಡೆದು ಪರಾಭವಗೊಂಡರು. ಉಪವಿಭಾಗಾಧಿಕಾರಿ ಡಾ.ಎಚ್.ಎಲ್.ನಾಗರಾಜ್ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸ್ಪರ್ಧಿಗಳು ಬಿಜೆಪಿಯ ಒಟ್ಟು 18 ಸದಸ್ಯರಿದ್ದು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಶಾಸಕ ಸಿ.ಟಿ.ರವಿ ಪಕ್ಷದ ಪರವಾಗಿ ಮತಚಲಾಯಿಸಿದ್ದರೆ ಜೆಡಿಎಸ್ನ ಇಬ್ಬರು, ಪಕ್ಷೇತರ ಸದಸ್ಯರೊಬ್ಬರು ಬಿಜೆಪಿಯನ್ನು ಬೆಂಬಲಿಸಿದ್ದಾರೆ.
ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕಟಗೊಳ್ಳುತ್ತಿದ್ದಂತೆ ಸಂಸದೆ ಶೋಭಾ ಕರಂದ್ಲಾಜೆ, ಶಾಸಕ ಸಿ.ಟಿ ರವಿ, ಬಿಜೆಪಿ ಜಿಲ್ಲಾಧ್ಯಕ್ಷ ಎಚ್.ಸಿ.ಕಲ್ಮರುಡಪ್ಪ, ಶಾಸಕ ಎಂ.ಪಿ.ಕುಮಾರಸ್ವಾಮಿ, ಸಿಡಿಎ ಅಧ್ಯಕ್ಷ ಆನಂದ್ ಸೇರಿದಂತೆ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಸಂಬಂಧಿಕರು, ಸ್ನೇಹಿತರು, ವಾರ್ಡಿನ ಪ್ರಮುಖರು ಹೂವಿನ ಹಾರಹಾಕಿ ಸಂಭ್ರಮಿಸಿ ಅಭಿನಂದನೆ ಸಲ್ಲಿಸಿದರು.ಈ ವೇಳೆ ಮಾತನಾಡಿದ ವರಸಿದ್ಧಿ ವೇಣುಗೋಪಾಲ್ ಕಸ ಮತ್ತು ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿಸಲು ಶ್ರಮಿಸುವುದಾಗಿ ನಗರಸಭೆ ನೂತನ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್ ತಿಳಿಸಿದರು.
ನಗರಸಭೆ ಅಧ್ಯಕ್ಷ ಸ್ಥಾನ ಅಲಂಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಮೂಲಸೌಕರ್ಯಗಳಾದ ಕುಡಿಯುವ ನೀರು, ಬೀದಿದೀಪಕ್ಕೆ ಆದ್ಯತೆ ನೀಡುವುದರೊಂದಿಗೆ ಕಾರ್ಯನಿರ್ವಹಿಸಲಾಗುವುದು ಎಂದು ಹೇಳಿದರು.
ನಗರಸಭೆ ಅಧಿಕಾರವಲ್ಲ, ಇದು ಜವಾಬ್ದಾರಿ ಎಂದು ತಿಳಿದುಕೊಂಡಿದ್ದೇನೆ. ಮೂರು ವರ್ಷ ನಗರಸಭೆ ಜನಪ್ರತಿನಿಧಿಗಳ ಆಡಳಿತವಿರಲಿಲ್ಲ, ನಗರಸಭೆ ವ್ಯಾಪ್ತಿಯಲ್ಲಿ ಹಲವಾರು ಸಮಸ್ಯೆಗಳಿವೆ. ಆಯುಕ್ತರು, ಅಧಿಕಾರಿಗಳೊಂದಿಗೆ ಚರ್ಚಿಸಿ ಅವುಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g