ದೇವನಗೂಲ್ನಲ್ಲಿ ಹತ್ತಾರು ಎಕರೆ ಅರಣ್ಯ ಬೆಂಕಿಗಾಹುತಿ
1 min readಕೊಟ್ಟಿಗೆಹಾರ:ಬಾಳೂರು ಮೀಸಲು ಅರಣ್ಯ ವ್ಯಾಪ್ತಿಯ ದೇವನಗೂಲ್ನಲ್ಲಿ ಹತ್ತಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿದೆ.
ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದ್ದು ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಸ್ಥಳಿಯರು ಬೆಂಕಿ ನಂದಿಸಲು ಮುಂದಾಗಿದ್ದು ಬೆಂಕಿ ನಿಯಂತ್ರಣಕ್ಕೆ ಬಾರದೇ ಇದ್ದಾಗ ಕೂಡಲೇ ಅರಣ್ಯ ಅಧಿಕಾರಿಗಳು ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸ್ಥಳೀಯರ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ಮೋಹನ್ಕುಮಾರ್, ಉಪ ವಲಯ ಅರಣ್ಯಾಧಿಕಾರಿ ಉಮೇಶ್, ಶಿವಕುಮಾರ್, ಅರಣ್ಯ ರಕ್ಷಕ ನಂದನ್ಕುಮಾರ್, ಅರಣ್ಯ ವೀಕ್ಷಕರಾದ ದಿನೇಶ್, ವೀರಪ್ಪ, ಸುದೀರ್, ಅಗ್ನಿಶಾಮಕ ನಿರೀಕ್ಷಕ ದೇವೇಂದ್ರಪ್ಪ, ಸುನೀಲ್ ಬಾಕ್ಲೆ, ರಮೇಶ್ ದೊಡ್ಡಮನಿ, ಚಾಲಕ ವಸಂತ್, ಸಿಬ್ಬಂದಿಗಳಾದ ಎಂ.ಆರ್.ಸಂದೀಪ್, ಜಿ.ಎನ್.ಪ್ರಶಾಂತ್ ಹಾಗೂ ಸ್ಥಳೀಯರು ಭಾಗವಹಿಸಿದ್ದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g