April 29, 2024

MALNAD TV

HEART OF COFFEE CITY

ಕಡವೆ ಬೇಟೆ, ಆರೋಪಿ ಬಂಧನ

1 min read

ಚಿಕ್ಕಮಗಳೂರು: ಕಡವೆ ಬೇಟೆಯಾಡಿ ಮನೆಯೊಂದರಲ್ಲಿ ಮಾಂಸ ಸಂಗ್ರಹಿಸಿಟ್ಟಿರುವ ಮಾಹಿತಿ‌ ಮೇರೆಗೆ ದಾಳಿ ನಡೆಸಿದ ಅರಣ್ಯಾಧಿಕಾರಿಗಳು ವ್ಯಕ್ತಿಯೊರ್ವನನ್ನು ಬಂಧಿಸಿದ್ದಾರೆ.

 

ತಾಲೂಕಿನ ಲಕ್ಯಾ ಹೋಬಳಿ ಕೆಂಗೇನಹಳ್ಳಿಯ ಸಣ್ಣ ಸಿದ್ದಯ್ಯ ಮತ್ತು ಆತನ ಇಬ್ಬರು ಸಹಚರರು ಅರಣ್ಯ ಪ್ರದೇಶದಲ್ಲಿ ಕಡವೆ ಶಿಕಾರಿ ಮಾಡಿ ಮನೆಯಲ್ಲಿ ಮಾಂಸ ಸಂಗ್ರಹಿಸಿಟ್ಟಿದ್ದರು. ಈ ಕುರಿತು ಖಚಿತ ಮಾಹಿತಿ ಪಡೆದ ಸಂಚಾರಿ ಅರಣ್ಯ ದಳದ ವಲಯ ಅರಣ್ಯಾಧಿಕಾರಿ ವೆಂಕಟೇಶ್ ಮತ್ತು ಸಿಬ್ಬಂದಿ ದಿಢೀರ್ ದಾಳಿ ನಡೆಸಿ ಆರೋಪಿ ಸಣ್ಣ ಸಿದ್ದಯ್ಯನನ್ನು ಬಂಧಿಸಿದ್ದಾರೆ‌. ಈ ವೇಳೆ ಆರೋಪಿಗಳು ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ 13 ಕೆಜಿ ಕಡವೆ ಮಾಂಸವನ್ನು ವಶಕ್ಕೆ ಪಡೆಯಲಾಗಿದೆ‌. ಸಣ್ಣ ಸಿದ್ದಯ್ಯ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ‌. ದಾಳಿ ವೇಳೆ ನಾಗರಾಜ್ ಮತ್ತು ಮಧು ಎಂಬ ಇಬ್ಬರು ಆರೋಪಿಗಳು ಪರಾರಿಯಾಗಿದ್ದು, ಅವರಿಗಾಗಿ ಶೋಧಕಾರ್ಯ ನಡೆದಿದೆ‌.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!