ಕಡತ ನಾಪತ್ತೆ ಪ್ರಕರಣ: ಪ್ರಕಾಶ್ ಬಂಧನ
1 min read
ಕೊಪ್ಪ: ತಾಲೂಕು ಕಚೇರಿಯಲ್ಲಿ ಫಾರಂ ನಂ. 50, 53, 57 ರ ಕಡತಗಳ ನಾಪತ್ತೆ ಪ್ರಕರಣದ ಆರೋಪಿಯಾಗಿದ್ದ ಪ್ರಕಾಶ್ ಎಂಬುವರನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಕೊಪ್ಪ ತಹಸೀಲ್ದಾರ್ ಕಚೇರಿಯಲ್ಲಿ ಫಾರಂ 50, 53 ಕಡತಗಳನ್ನು ದುರುದ್ದೇಶದಿಂದ ಬಟ್ಟಿಟ್ಟುಕೊಂಡು ಹಣ ಕೊಟ್ಟವರ ಕಡತಗಳನ್ನಷ್ಟೇ ಭೂ ಮಂಜೂರಾತಿ ಪ್ರಕ್ರಿಯೆ ಪ್ರಸ್ತಾವನೆಗೆ ಸಲ್ಲಿಸುತ್ತಿದ್ದ ಆರೋಪ ಕೇಳಿ ಬಂದಿತ್ತು. ಜೊತೆಗೆ ಬಳಿಕ ಶೃಂಗೇರಿ ತಹಸೀಲ್ದಾರ್ ಕಚೇರಿಯಲ್ಲಿ ಕೇಸ್ ವರ್ಕರ್ ಆಗಿ ನಿಯುಕ್ತಿಗೊಂಡಿದ್ದ ಪ್ರಕಾಶ್ ಅಲ್ಲಿಯೂ ಸಹ ಹಕ್ಕುಪತ್ರ ಹಗರಣದಲ್ಲಿ ಬಾಗಿಯಾಗಿರುವ ಬಗ್ಗೆ ಸಾಕ್ಷ್ಯಗಳು ಲಭ್ಯವಾದ ಹಿನ್ನೆಲೆಯಲ್ಲಿ ಕಳೆದ ಕೆಲ ದಿನಗಳ ಹಿಂದೆ ಜಿಲ್ಲಾಧಿಕಾರಿ ಕೆ.ಎನ್ ರಮೇಶ್ ಇವರನ್ನು ಅಮಾನತ್ತು ಮಾಡಿದ್ದರು.
ಕಡತ ನಾಪತ್ತೆಯಾಗಿ ಹಲವು ತಿಂಗಳು ಕಳೆದ್ರೂ ತಾಲೂಕು, ಜಿಲ್ಲಾಡಳಿತದ ನಿರ್ಲಕ್ಷ್ಯ ಧೋರಣೆ ಬಗ್ಗೆ ತೀವ್ರ ಆಕ್ರೋಶಗಳು ವ್ಯಕ್ತವಾದ ಹಿನ್ನಲೆಯಲ್ಲಿ ಕೊಪ್ಪ ತಹಸೀಲ್ದಾರ್ ಪರಮೇಶ್ ಕೆಲ ದಿನಗಳ ಹಿಂದೆ ಕೊಪ್ಪ ಪೆÇಲೀಸ್ ಠಾಣೆಯಲ್ಲಿ ಪ್ರಕಾಶ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು. ಆರೋಪಿ ಪ್ರಕಾಶ್ ವಿರುದ್ಧ ಕ್ರಮವಹಿಸಿರುವ ಕೊಪ್ಪ ಪೋಲೀಸರು ಚಿಕ್ಕಮಗಳೂರಿನಲ್ಲಿರುವ ಪ್ರಕಾಶ್ ಮನೆಯ ಮೇಲೆ ದಾಳಿ ನಡೆಸಿ ಬಂಧಿಸಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g