May 8, 2024

MALNAD TV

HEART OF COFFEE CITY

ಹಗಲು ಹೊತ್ತಿನಲ್ಲಿ ಮನೆಗಳಿಗೆ ಕನ್ನ: ಖತರ್ ನಾಕ್ ಕಳ್ಳ ಅಂದರ್, ಬರೋಬ್ಬರಿ 52,68778 ರೂಪಾಯಿ ಮೌಲ್ಯದ ಚಿನ್ನಾಭರಣ,ನಗದು ವಶ

1 min read

 

 

ಚಿಕ್ಕಮಗಳೂರು: ಹಗಲು ಹೊತ್ತಿನಲ್ಲಿ ಮನೆಗಳಿಗೆ ಕನ್ನ ಹಾಕುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಚಿಕ್ಕಮಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಇತ್ತೀಚ್ಚೆಗೆ ನಗರ ಪೊಲೀಸ್ ಠಾಣಾ ವ್ಯಾಪ್ತಿ ಹಾಗೂ ಗ್ರಾಮಾಂತರ ಪೊಲೀಸ್ ಠಾಣಾ ವ್ಯಪ್ತಿಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣ ತನಿಖೆ ನಡೆಸಿದ ಪೊಲೀಸರು ಹಾಸನ ಮೂಲದ ಸಂತೋಷ್ (33) ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

 

ಬಂಧಿತನಿಂದ 6 ಲಕ್ಷ ನಗದು, 44,68,030 ರೂಪಾಯಿ ಮೌಲ್ಯದ ಬಂಗಾರ, 1,20,748 ರೂಪಾಯಿ ಮೌಲ್ಯದ ಬೆಳ್ಳಿ ವಸ್ತುಗಳು ಹಾಗೂ 80 ಸಾವಿರ ಮೌಲ್ಯದ ಟಿವಿಎಸ್ ಜುಪಿಟರ್ ಬೈಕ್ ಸೇರಿದಂತೆ ಒಟ್ಟು 52,68,778 ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎಂ.ಹೆಚ್ ಅಕ್ಷಯ್ ತಿಳಿಸಿದ್ದಾರೆ.

 

ಈತನ ವಿರುದ್ಧ ಚಿಕ್ಕಮಗಳೂರು,ಮಂಡ್ಯ, ಹಾಸನ, ಮೈಸೂರು,ತುಮಕೂರು ಜಿಲ್ಲೆಯ ವಿವಿಧ ಠಾಣೆಯಲ್ಲಿ ದೂರು ದಾಖಲಾಗಿದ್ದು ಇನ್ನು ಅನೇಕ ಪ್ರಕರಣಗಳಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.

 

ಪೊಲೀಸ್ ವರಿಷ್ಟಾಧಿಕಾರಿ ಎಂ.ಹೆಚ್ ಅಕ್ಷಯ್ ಮಾರ್ಗದರ್ಶನದಲ್ಲಿ ಎಎಸ್ಪಿ ಶೃತಿ, ಪೊಲೀಸ್ ಉಪಾಧೀಕ್ಷರಾದ ಪ್ರಭು ಡಿ.ಟಿ ಹಾಗೂ ನಗರ ಪೊಲೀಸ್ ಠಾಣೆ ಆರಕ್ಷಕ ನಿರೀಕ್ಷಕ ಗುರುಪ್ರಸಾದ್ ಮತ್ತು ಪೊಲೀಸ್ ಸಬ್ ಇನ್ಸಫೆಕ್ಟರ್ ಶರತ್ ನಾಗೇಂದ್ರ ನಾಯ್ಕ್, ಸತೀಶ್ ಹಾಗೂ ಸಿಬ್ಬಂದಿಗಳು ಕಾರ್ಯಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಎಂ.ಹೆಚ್ ಅಕ್ಷಯ್ ತಂಡಕ್ಕೆ ಪ್ರಶಸ್ತಿ ಘೋಷಿಸಿದ್ದಾರೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!