May 9, 2024

MALNAD TV

HEART OF COFFEE CITY

ಅಪ್ಪನ ಜೊತೆ ಜಗಳವಾಡಿ ಆತ್ಮಹತ್ಯೆಗೆ ಶರಣಾದ 4ನೇ ಕ್ಲಾಸ್ ವಿದ್ಯಾರ್ಥಿ 

1 min read

 

 

ಚಿಕ್ಕಮಗಳೂರು.: ಅಪ್ಪನ ಜೊತೆ ಜಗಳವಾಡಿ ನಾಲ್ಕನೇ ತರಗತಿ ಓದುತ್ತಿದ್ದ 9 ವರ್ಷದ ಬಾಲಕ ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ಆಲ್ದೂರು ಗ್ರಾಮದಲ್ಲಿ ನಡೆದಿದೆ. ಮೃತನನ್ನ ವರ್ಷದ ಬಾಲಕ ಚೇತನ್ ಎಂದು ಗುರುತಿಸಲಾಗಿದೆ. ಮೃತ ಬಾಲಕನ ಪೋಷಕರಾದ ಗಣೇಶ್ ಹಾಗೂ ಶೋಭಾ ಮೂಲತಃ ಹಾವೇರಿ ಜಿಲ್ಲೆಯ ರಾಣಿಬೆನ್ನೂರು ಶೇಷಗಿರಿ ಗ್ರಾಮದವರು. ಕಳೆದ ನಾಲ್ಕೈದು ವರ್ಷಗಳ ಹಿಂದೆ ಆಲ್ದೂರಿಗೆ ಬಂದಿದ್ದ ಕುಟುಂಬ ಇಬ್ಬರು ಗಂಡು ಮಕ್ಕಳೊಂದಿಗೆ ಆಲ್ದೂರು ಸಮೀಪದ ಹೊಸಳ್ಳಿ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದು ಕಾಫಿತೋಟಗಳಿಗೆ ಕೂಲಿ ಕೆಲಸಕ್ಕೆ ಹೋಗುತ್ತಿದ್ದರು. ಆಗಾಗ್ಗೆ ರಾಣಿಬೆನ್ನೂರಿಗೆ ಹೋಗಿ ಬರುತ್ತಿದ್ದರು. ಮೃತ ಬಾಲಕ ತುಸು ಸಿಟ್ಟಿನ ಬಾಲಕನಾಗಿದ್ದ ಎಂದು ಸ್ಥಳಿಯರು ಮಾಹಿತಿ ನೀಡಿದ್ದು, ಆಗಾಗ್ಗೆ ಕೆಲ ವಿಚಾರಗಳಿಗೆ ಅಪ್ಪ-ಅಮ್ಮನ ಜೊತೆ ಜಗಳವಾಡುತ್ತಿದ್ದನು. ನಾಲ್ಕು ದಿನಗಳ ಹಿಂದೆ ಸ್ವಂತ ಊರು ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನಲ್ಲಿ ಜಾತ್ರೆ ಇದ್ದ ಕಾರಣ ಎಲ್ಲರೂ ಹೋಗಿದ್ದರು. ಈ ವೇಳೆ ಅಪ್ಪನ ಜೊತೆ ಜಗಳವಾಡಿದ ಬಾಲಕ ಮನೆಯಲ್ಲಿನ ಜೋಕಾಲಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಓದಿನಲ್ಲಿ ಚುರುಕು ಹಾಗೂ ಸದಾ ಲವಲವಿಕೆಯಿಂದ ಇರುತ್ತಿದ್ದ ಬಾಲಕನ ಸಾವಿಗೆ ಶಾಲೆಯ ಶಿಕ್ಷಕ ವರ್ಗ ಕೂಡ ಬೇಸರ ವ್ಯಕ್ತಪಡಿಸಿ, ಆತನ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿದ್ದಾರೆ. ಆತ್ಮಹತ್ಯೆ ಪದದ ಅರ್ಥವೇ ತಿಳಿಯದ ಎಳೆ ವಯಸ್ಸಿನ ಮಕ್ಕಳು ಈ ರೀತಿಯ ದುಸ್ಸಾಹಕ್ಕೆ ಕೈಹಾಕುತ್ತಿದ್ದಾರೆ ಎಂದರೆ ಆಧುನಿಕ ಸಮಾಜ ಎತ್ತ ಸಾಗುತ್ತಿದೆ ಎಂಬ ಪ್ರಶ್ನೆ ಮೂಡಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!