ಆರ್.ಟಿ.ಐ ಅಡಿ ಶಾಲೆಗೆ ದಾಖಲಾಗಿದ್ದ ವಿದ್ಯಾರ್ಥಿನಿಗೆ ಕಿರುಕುಳ, ಸೂಕ್ತ ಕ್ರಮಕ್ಕೆ ಆಗ್ರಹ
1 min read
ಚಿಕ್ಕಮಗಳೂರು: ಆರ್.ಟಿ.ಐ ಅಡಿಯಲ್ಲಿ ಖಾಸಗಿ ಶಾಲೆಗೆ ದಾಖಲಾಗಿದ್ದ ಪರಿಶಿಷ್ಟ ಜಾತಿ ವಿದ್ಯಾರ್ಥಿನಿಯನ್ನು ಶಾಲೆ ಬಿಡಿಸುವ ನಿಟ್ಟಿನಲ್ಲಿ ಶಾಲೆಯ ಸಿಬ್ಬಂದಿ ಕಿರುಕುಳ ನೀಡುತ್ತಿದ್ದಾರೆ. ಜಿಲ್ಲಾಡಳಿತ ಕೂಡಲೇ ಖಾಸಗಿ ಶಾಲೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ವಿಶ್ವರತ್ನ ಯುವ ಸಂಘದಿಂದ ಅಪರ ಜಿಲ್ಲಾಧಿಕಾರಿ ಬಿ.ಆರ್.ರೂಪ ಅವರಿಗೆ ಮನವಿ ಸಲ್ಲಿಸಿದರು.
ಸೋಮವಾರ ಈ ಸಂಬಂಧ ನೊಂದ ಕುಟುಂಬದ ಸದಸ್ಯರೊಂದಿಗೆ ವಿಶ್ವರತ್ನ ಯುವ ಸಂಘ ದ ಜಿಲ್ಲಾಧ್ಯಕ್ಷ ವೆಂಕಟೇಶ್ ನೇತೃತ್ವದಲ್ಲಿ ಮನವಿ ಸಲ್ಲಿಸಿದರು. ಪರಿಶಿಷ್ಟ ಜಾತಿ ಸಮುದಾಯ ದ ವಿದ್ಯಾರ್ಥಿನಿಗೆ ಮತ್ತು ಪೋಷಕರಿಗೆ ಖಾಸಗಿ ಶಾಲೆ ಸಿಬ್ಬಂದಿ ನೀಡುತ್ತಿರುವ ಕಿರುಕುಳ ತಪ್ಪಿಸಬೇಕು. ವಿದ್ಯಾರ್ಥಿನಿ ಶಿಕ್ಷಣ ಮುಂದುವರೆಸಲು ಅನುವು ಮಾಡಿಕೊಡಬೇಕೆಂದು ಆಗ್ರ ಹಿಸಿದರು.
ಟಿಪ್ಪುನಗರದ ರಾಜು ಮತ್ತು ಅಂಬಿಕಾ ದಂಪತಿಗಳಿಗೆ ಇಬ್ಬರು ಹೆಣ್ಣುಮಕ್ಕಳಿದ್ದು, ಹಿರಿಯ ಮಗಳು ವಿಕಲಚೇತನ ಮಗುವಾಗಿದ್ದು, ಕಿರಿಯ ಮಗಳನ್ನು ಚೆನ್ನಾಗಿ ಓದಿಸುವ ಆಸೆಯಿಂದ ಪೋಷಕರು ಖಾಸಗಿ ಆಂಗ್ಲ ಮಾಧ್ಯಮ ಶಾಲೆಗೆ ಸೇರಿಸಿದ್ದರು. ಎಲ್ಕೆಜಿ, ಯುಕೆಜಿ ಇದೇ ಖಾಸಗಿ ಶಾಲೆಯಲ್ಲಿ ಪೂರ್ಣಗೊಳಿಸಿ 1ನೇ ತರಗತಿಗೆ ಆರ್ಟಿಇ ಯಡಿಯಲ್ಲಿ ಅದೇ ಶಾಲೆಗೆ ದಾಖಲಿಸಿದ್ದಾರೆ. ಈಗ 3ನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿಗೆ ಮತ್ತು ಅವರ ಪೋಷ ಕರಿಗೆ ಶಾಲಾ ಸಿಬ್ಬಂದಿ ಸುಖಾ ಸುಮ್ಮನೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದರು.
ನಿನ್ನಿಂದ ಶಾಲೆಗೆ ಯಾವ ಆದಾಯವು ಇಲ್ಲ, ಶಾಲೆಗೆ ಏಕೆ ಬರುತ್ತೀಯಾ, ಬೇರೆ ಶಾಲೆಗೆ ಸೇರು ಎಂದು ಕಿರುಕುಳ ನೀಡುತ್ತಿದ್ದಾರೆ. ಇದರಿಂದ ವಿದ್ಯಾರ್ಥಿನಿಗೆ ಮನಸ್ಸಿಗೆ ನೋವುಂಟು ಮಾಡುತ್ತಿದೆ ಎಂದು ಪೋಷಕರು ದೂರಿದ್ದಾರೆ.
ಆರ್ಟಿಇ ಅಡಿಯಲ್ಲಿ ದಾಖಲಾದ ಒಂದೇ ಕಾರಣಕ್ಕೆ ಪರಿಶಿಷ್ಟ ಜಾತಿ ಸಮುದಾಯ ಶಾಲಾ ಬಾಲಕಿಯನ್ನು ಶಾಲೆಯಿಂದ ಹೊರ ಹಾಕಲು ಶಾಲೆಯ ಆಡಳಿತ ಮಂಡಳಿ ಸಿಬ್ಬಂದಿ ಕುರು ಕುಳ ನೀಡುತ್ತಿದ್ದಾರೆ. ಕೂಡಲೇ ಶಾಲೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಅಂಬೇಡ್ಕರ್ ಸೇನೆ ಜಿಲ್ಲಾಧ್ಯಕ್ಷ ಸಂತೋಷ್ ಇದ್ದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g