ಜಾತ್ರೆ ,ದೇವಸ್ಥಾನಗಳಿಗೆ ಮುಸ್ಲಿಂ ವ್ಯಾಪಾರಸ್ಥರಿಗೆ ಅವಕಾಶ ನೀಡದಂತೆ ಮನವಿ
1 min readಚಿಕ್ಕಮಗಳೂರು: ಕೆಲ ದಿನಗಳ ಹಿಂದಷ್ಟೇ ರಾಜ್ಯಾದ್ಯಂತ ಆರಂಭವಾದ ಮುಸಲ್ಮಾನರೊಂದಿಗಿನ ವ್ಯಾಪಾರ ವಹಿವಾಟುಗಳ ನಿಷೇಧದ ಕುರಿತ ಹೋರಾಟದ ಅಭಿಯಾನ ಮಲೆನಾಡಿನಲ್ಲೂ ಆರಂಭವಾಗಿದೆ. ರಾಜ್ಯದಲ್ಲಿ ಮುಸಲ್ಮಾನರು ಹಿಜಾಬ್ ತೀರ್ಪನ್ನು ವಿರೋಧಿಸಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಪ್ರತಿಭಟಿಸುವ ಮೂಲಕ ಸಂವಿಧಾನವನ್ನು ವಿರೋಧಿಸಿದ್ದಾರೆ. ಈ ನಿಟ್ಟಿನಲ್ಲಿ ಹಿಂದೂ ಸಂಪ್ರದಾಯ, ಆಚರಣೆಗಳಂತೆ ನಡೆಯುವ ಜಾತ್ರೆಯಲ್ಲಿ ಅಂಗಡಿ ಮಳಿಗೆಗೆ ಅವಕಾಶ ನೀಡಬಾರದೆಂದು ಸ್ಥಳೀಯರು ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸುವ ಮೂಲಕ ಒತ್ತಾಯಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಅಡ್ಡಗದ್ದೆ ಗ್ರಾಮ ಪಂಚಾಯಿತಿಯ ಪಿಡಿಓ ಗ್ರಾ.ಪಂ ಅಧ್ಯಕ್ಷರಿಗೆ ಚಿತ್ರವಳ್ಳಿ ಶ್ರೀ ವನ ದುರ್ಗಾ ಪರಮೇಶ್ವರಿ ಜಾತ್ರಾ ಮಹೋತ್ಸವದಲ್ಲಿ ಮುಸಲ್ಮಾನರಿಗೆ ಅಂಗಡಿ,ಮುಂಗಟ್ಟುಗಳಿಗೆ ಅವಕಾಶ ನೀಡಬಾರದೆಂದು ಅಡ್ಡಗದ್ದೆ ಗ್ರಾಮಸ್ಥರು ಮನವಿ ಸಲ್ಲಿಸುವ ಮೂಲಕ ಒತ್ತಾಯಿಸಿದರು.ಇನ್ನು ಜಾತ್ರೆಯಲ್ಲಿ ಹಿಂದೂ ಕುಟುಂಬಗಳು ಹರಿಕೆ ಕಾಣಿಕೆ ರೂಪದಲ್ಲಿ ಸೇವೆಸಲ್ಲಿಸುತ್ತಾ ಸಹಕಾರ ನೀಡುತ್ತಾರೆ, ಆದರೆ ಬೇರೆಡೆಗಳಿಂದ ಆಗಮಿಸುವ ಅನ್ಯಮತೀಯರು ಕಳ್ಳತನ ಸೇರಿದಂತೆ ಇನ್ನಿತರ ದುಷ್ಕೃತ್ಯಗಳಲ್ಲಿ ಭಾಗಿಯಾಗಿ ಕೆಡುಕುಂಟು ಮಾಡುತ್ತಾರೆ ಈ ಕಾರಣಕ್ಕಾಗಿ ಅವರಿಗೆ ಅವಕಾಶ ನೀಡಬಾರದು ಎಂದು ಅಡ್ಡಗದ್ದೆ ಸ್ಥಳೀಯರು ದೂರಿದ್ದಾರೆ.
ಮೊನ್ನೆಯಷ್ಟೇ ಹೈಕೋರ್ಟ್ ನೀಡಿದ ಹಿಜಾಬ್ ಕುರಿತಾದ ತೀರ್ಪನ್ನು ವಿರೋಧಿಸಿ ಸಂವಿಧಾನ ವಿರೋಧಿ ಚಟುವಟಿಕೆ ನಡೆಸಿರುತ್ತಾರೆ ಹಾಗೂ ಈ ನೆಲದ ಕಾನೂನನ್ನು ವಿರೋಧಿಸಿರುತ್ತಾರೆ ಆದ ಕಾರಣ ಯಾವುದೇ ಕಾರಣಕ್ಕೂ ಅನ್ಯಮತೀಯರಿಗೆ ಚಿತ್ರವಳ್ಳಿ ಜಾತ್ರೆಯಲ್ಲಿ ವ್ಯಾಪಾರ ವಹಿವಾಟು ನಡೆಸಲು ಅವಕಾಶ ನೀಡಬಾರದೆಂದು ಸ್ಥಳೀಯರು ಗ್ರಾಮ ಪಂಚಾಯಿತಿಗೆ ಒತ್ತಾಯಿಸಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g