ಶ್ರೀಗಂಧ ಕಳ್ಳತನ: ಆರೋಪಿ ಬಂಧನ
1 min read
ಚಿಕ್ಕಮಗಳೂರು: ಕಾಮೇನಹಳ್ಳಿ ಮೀಸಲು ಅರಣ್ಯಪ್ರದೇಶದಲ್ಲಿ ಶ್ರೀಗಂಧ ಮರಗಳ ಕಳ್ಳತನದಲ್ಲಿ ತೊಡಗಿದ್ದ ಗುಂಪಿನ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.
ಗಂಧಚೋರರು ಕಾಮೇನಹಳ್ಳಿ ಮೀಸಲು ಅರಣ್ಯದಲ್ಲಿ ಶ್ರೀಗಂಧದ ಮರಗಳನ್ನು ಕಡಿದು, ತುಂಡು ಮಾಡಿ ಮಾರಾಟ ಮಾಡಲು ಸಾಗಿಸುತ್ತಿದ್ದ ವೇಳೆ ಚಿಕ್ಕಮಗಳೂರು ವಲಯ ಅರಣ್ಯಾಧಿಕಾರಿಗಳು ದಾಳಿ ನಡೆಸಿ ಲಕ್ಷಾಂತರ ರು. ಬೆಲೆಬಾಳುವ ಶ್ರೀಗಂಧದ ಮರದ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ವೇಳೆ ಶಿವಮೊಗ್ಗ ಮೂಲದ ಹೇಮಣ್ಣ ಎಂಬ ಆರೋಪಿ ಸರೆಸಿಕ್ಕಿದ್ದು, ನಾಲ್ವರು ಪರಾರಿಯಾಗಿದ್ದಾರೆ.
ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ಸ್ವಾತಿ, ಉಪವಲಯ ಅರಣ್ಯಾಧಿಕಾರಿ ನಾಗೇಂದ್ರ, ಅರಣ್ಯ ರಕ್ಷಕ ನಂದೀಶ್, ಸಿಬ್ಬಂದಿಯಾದ ಅಶೋಕ, ಮಂಜುನಾಥ್, ಕಿರಣ್, ಚಂದ್ರೇಗೌಡ, ಸುಮನ್ ಪಾಲ್ಗೊಂಡಿದ್ದರು.
ಕಾಮೇನಹಳ್ಳಿ ಮೀಸಲು ಅರಣ್ಯದಲ್ಲಿ ಆಂಧ್ರಪ್ರದೇಶ, ತಮಿಳುನಾಡಿನ ಶ್ರೀಗಂಧ ಕಳ್ಳ ಸಾಗಣೆದಾರರ ಜಾಲಗಳು ಸಕ್ರಿಯವಾಗಿದ್ದು, ಜಿಲ್ಲೆಯ ಅಮೂಲ್ಯ ಅರಣ್ಯ ಸಂಪತ್ತನ್ನು ಕೊಳ್ಳೆಹೊಡೆಯುತ್ತಿವೆ. ಅರಣ್ಯ ಸಿಬ್ಬಂದಿ ಕಠಿಣ ಕ್ರಮಕೈಗೊಳ್ಳುವ ಮೂಲಕ ಇಂತಹ ಜಾಲಗಳ ಆಟಾಟೋಪಕ್ಕೆ ಕಡಿವಾಣ ಹಾಕಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g