May 6, 2024

MALNAD TV

HEART OF COFFEE CITY

ಶ್ರೀಗಂಧಕ್ಕೆ ಸೂಕ್ತ ಪರಿಹಾರಕ್ಕೆ ಆಗ್ರಹ, ರಕ್ತದ ಮೂಲಕ ಮನವಿ

1 min read

 

 

ಚಿಕ್ಕಮಗಳೂರು: ಶ್ರೀ ಗಂಧ ಬೆಳೆಗೆ ಸೂಕ್ತ ಪರಿಹಾರಕ್ಕೆ ಆಗ್ರಹಿಸಿ, ಸರ್ಕಾರಕ್ಕೆ ಶ್ರೀಗಂಧ ಬೆಳೆಗಾರರು ರಕ್ತದಲ್ಲಿ ಮನವಿ ಪತ್ರ ಬರೆದ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ರಕ್ತದಲ್ಲಿ ಬರೆದ ಮನವಿ ಪತ್ರವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗೆ ಶ್ರೀಗಂಧ ಬೆಳೆಗಾರರು ಸಲ್ಲಿಸಿದ್ದು, ಕಳೆದ 30 ದಿನಗಳಿಂದ ಅನಿರ್ದಿಷ್ಟಾವದಿ‌ ಧರಣಿಯನ್ನು ಶ್ರೀಗಂಧ ಬೆಳೆಗಾರರು ನಡೆಸುತ್ತಿದ್ದಾರೆ. 22 ರೈತರ ಕುಟುಂಬದಿಂದ ಕಳೆದ 30 ದಿನಗಳಿಂದ ಈ ಪ್ರತಿಭಟನೆ ನಡೆಯುತ್ತಿದ್ದು, ಉಪವಾಸ ಸತ್ಯಾಗ್ರಹ, ಅರೆಬೆತ್ತಲೆ ಪ್ರತಿಭಟನೆ ಯನ್ನು ಪ್ರತಿಭಟನಾಕಾರರು ನಡೆಸುತ್ತಿದ್ದಾರೆ. 62 ಕೋಟಿ ಪರಿಹಾರದ ಜಾಗದಲ್ಲಿ ಎರಡೂವರೆ ಲಕ್ಷ ಪರಿಹಾರ ನೀಡುತ್ತಿದ್ದು, ಇದು ತುಂಬಾ ಅನ್ಯಾಯ ಎಂದು

ಸರ್ಕಾರಕ್ಕೆ ರಕ್ತದಲ್ಲಿ ಪತ್ರವನ್ನು ಶ್ರೀಗಂಧದ ಬೆಳೆಗಾರರು ಬರೆದಿದ್ದಾರೆ. ಸೀರೆಂಜ್ ನಲ್ಲಿ ರಕ್ತ ತೆಗೆದು ಸರ್ಕಾರಕ್ಕೆ ಪತ್ರ ಬರೆದಿದ್ದು,

ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ. ಕಳೆದೊಂದು ತಿಂಗಳಿನಿಂದ ಶ್ರೀಗಂಧ ಬೆಳಗಾರರು ಪ್ರತಿಭಟನೆ ನಡೆಸುತ್ತಿದ್ದು, ಚಿಕ್ಕಮಗಳೂರು ಜಿಲ್ಲೆಯ, ತರೀಕೆರೆ ತಾಲೂಕಿನ ಹಳಿಯೂರು ಗ್ರಾಮದಲ್ಲಿ ಈ ಧರಣಿ ನಡೆಸುತ್ತಿದ್ದಾರೆ. ಹೈಕೋರ್ಟ್ ನಿರ್ದೇಶನದಂತೆ ಪರಿಹಾರ ನೀಡಲು ಒತ್ತಾಯವನ್ನು ರೈತರು ಮಾಡುತ್ತಿದ್ದು, 22 ರೈತರಿಗೆ 62 ಕೋಟಿ ಪರಿಹಾರ ಬರಬೇಕು.ಆದರೆ ಸರ್ಕಾರ ಎರಡೂವರೆ ಲಕ್ಷ ಪರಿಹಾರ ನೀಡುತ್ತಿದೆ. ಈಗ ಘಟನೆಗೆ ಸಂಬಂಧಪಟ್ಟಂತೆ, ಕಳೆದೊಂದು ವಾರದಿಂದ ಅರೆಬೆತ್ತಲೆ ಪ್ರತಿಭಟನೆ ರೈತರು ನಡೆಸಿದ್ದರು

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!