May 6, 2024

MALNAD TV

HEART OF COFFEE CITY

ಬಿಜೆಪಿ ಡಬಲ್ ಇಂಜಿನ್ ಸರ್ಕಾರವಲ್ಲ,- ಬದಲಾಗಿ ಡಕೋಟಾ ಸರ್ಕಾರ

1 min read

ಚಿಕ್ಕಮಗಳೂರು-ದೇಶದಲ್ಲಿ ಡಬಲ್ ಇಂಜಿನ್ ಸರ್ಕಾರ ಎಂದು ಹೇಳಿಕೊಳ್ಳುವ ಬಿಜೆಪಿ ಡಬಲ್ ಇಂಜಿನ್ ಸರ್ಕಾರವಲ್ಲ ಬದಲಾಗಿ ಡಕೋಟಾ ಸರ್ಕಾರ ಎಂದು ಜಿಲ್ಲಾ ಕಾರ್ಯದರ್ಶಿ ಬಿ.ಎಂ ಸಂದೇಶ್ ವ್ಯಂಗ್ಯವಾಡಿದರು.ನಗರದ ಎ.ಐ.ಸಿ.ಸಿ ಕಾರ್ಯದರ್ಶಿ ಬಿ.ಎಂ ಸಂದೀಪ್ ಮನೆಯ ಬಳಿ ಸಿಲಿಂಡರ್ ಬೆಲೆ ಏರಿಕೆಯನ್ನು ವಿರೋಧಿಸಿ ಸಿಲಿಂಡರ್‍ಗೆ ಹಾರ ಹಾಕಿ ಅಚ್ಚೇ ದಿನ್ ಕಾಹಾ ಅಗಾಯ ಎಂದು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

ದೇಶದಲ್ಲಿ ಸಿಲಿಂಡರ್ ಬೆಲೆ ಏರಿಕೆ ಹಾಗೂ ಸರ್ಕಾರದ ವೈಫಲ್ಯದ ವಿರುದ್ಧ ಹೋರಾಟ ಮಾಡಲು ಕಾಂಗ್ರೆಸ್ ಪಕ್ಷ ತಯಾರಾಗಿದೆ. ದೇಶದಲ್ಲಿ ಕಾಂಗ್ರೆಸ್ ಪಕ್ಷವು ಜನಸಾಮಾನ್ಯರ ಧ್ವನಿಯಾಗಿ ಅಂದಿನಿಂದಲೂ ಕಾರ್ಯನಿರ್ವಹಿಸಿಕೊಂಡು ಬಂದಿದೆ. ಅವರ ಸಮಸ್ಯೆಗಳನ್ನು ಆಲಿಸಿ ಸ್ಪಂದಿಸುವ ಗುಣವನ್ನು ಕಾಂಗ್ರೆಸ್ ಹೊಂದಿದೆ. ಆದರೆ ಕೇಂದ್ರ ಹಾಗೂ ಬಿಜೆಪಿ ಸರ್ಕಾರಗಳು ನೆರೆ, ಅತಿವೃಷ್ಟಿ, ಕೋವಿಡ್ ಹಾಗೂ ಲಾಕ್ ಡೌನ್ ನಿರ್ವಹಿಸುವಲ್ಲಿ ಸಂಪೂರ್ಣ ವಿಫಲವಾಗಿ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿದರು.

ನೆರೆ ಪರಿಹಾರ, ಲಾಕ್ ಡೌನ್ ಪರಿಹಾರ ಹಾಗೂ ಕೋವಿಡ್ ನಿಂದ ಮೃತಪಟ್ಟವರಿಗೆ ಪರಿಹಾರ ನೀಡದೇ ರಾಜ್ಯದ ಜನತೆಗೆ ಮೋಸ ಎಸಗುತ್ತಿದೆ. ಪಂಚ ರಾಜ್ಯಗಳ ಚುನಾವಣೆ ಮುಗಿಯುತ್ತಿದ್ದಂತೆ ಕೇಂದ್ರ ಬಿಜೆಪಿ ಪೆಟ್ರೋಲ್, ಡೀಲೆಸ್, ಇಂಧನ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯನ್ನು ದಿನದಿಂದ ದಿನಕ್ಕೆ ಏರಿಸುತ್ತಿದೆ. ಸಾಮಾನ್ಯ ಜನರು ಬದುಕುವುದೇ ಕಷ್ಟವಾಗಿದೆ. ಚುನಾವಣೆ ಬಂದಾಗ ಮಾತ್ರವೇ ನಿಮ್ಮದು ಜನಪರ ಸರ್ಕಾರ. ಜನರು ಮುಂದೆ ತಕ್ಕ ಪಾಠ ಕಳಿಸುವ ಕಾಲ ಹತ್ತಿರವಿದೆ ಎಂದು ತಿಳಿಸಿದರು.. ಈ ಸಂಧರ್ಭದಲ್ಲಿ ಜಿಲ್ಲಾ ಸೋಷಿಯಲ್ ಮೀಡಿಯಾ ಕಾರ್ಯಾಧ್ಯಕ್ಷರಾದ ಜಿ ಕಾರ್ತಿಕ್ ಚೆಟ್ಟಿಯಾರ್, ಭರತ್ ಮತ್ತಿತರರು ಇದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!