May 18, 2024

MALNAD TV

HEART OF COFFEE CITY

ಶಾಸಕ ಸಿ.ಟಿ.ರವಿ ಹುಟ್ಟೂರು ಚಿಕ್ಕಮಗಳೂರಿನ ಚಿಕ್ಕಮಾಗರಹಳ್ಳಿಯಲ್ಲೂ ಮುಸ್ಲಿಮರಿಗೆ ಬ್ಯಾನ್ 

1 min read

 

 

ಚಿಕ್ಕಮಗಳೂರು..ಚಿಕ್ಕಮಗಳೂರು ಶಾಸಕ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹುಟ್ಟುರಾದ ತಾಲೂಕಿನ ಚಿಕ್ಕಮಾಗರಹಳ್ಳಿ ಗ್ರಾಮದಲ್ಲೂ ಮುಸ್ಲಿಂ ಬ್ಯಾನ್ ಕೂಗು ಜೋರಾಗಿದೆ. ಇಂದಿನಿಂದ ಆರಂಭವಾದ ದೇವೀರಮ್ಮನ ಸುಗ್ಗಿ ಹಬ್ಬಕ್ಕೆ ಮುಸ್ಲಿಮರಿಗೆ ವ್ಯಾಪಾರ ನಡೆಸಲು ಅವಕಾಶವಿಲ್ಲ ಎಂದು ಊರಿನ ಆರಂಭದಲ್ಲೇ ಬೋರ್ಡ್ ಹಾಕಿದ್ದಾರೆ. ಇಂದಿನಿಂದ ಆರಂಭವಾದ ಜಾತ್ರೆ ಇನ್ನೊಂದು ವಾರಗಳ ಕಾಲ ನಡೆಯಲಿದೆ. ಗುರುವಾರ ಜಾತ್ರೆ ನಡೆಯಲಿದ್ದು, ಜಾತ್ರೆಗೆ ಸಾವಿರಾರು ಜನ ಸೇರುತ್ತಾರೆ. ಈ ಬಾರಿಯ ಸುಗ್ಗಿ ಹಬ್ಬಕ್ಕೆ ಮುಸ್ಲಿಮರಿಗೆ ನಮ್ಮ ಊರಿನಲ್ಲಿ ವ್ಯಾಪಾರ ವಹಿವಾಟು ನಡೆಸಲು ಅವಕಾಶವಿಲ್ಲವೆಂದು ಹಳ್ಳಿಯ ದ್ವಾರಬಾಗಿಲಿನಲ್ಲೇ ಬ್ಯಾನರ್ ಹಾಕಿದ್ದಾರೆ. ಈ ದೇಶದ ಕಾನೂನನ್ನ ಗೌರವಿಸದ, ನಾವು ಪೂಜಿಸುವ ಗೋವುಗಳನ್ನ ಕಡಿದು ಕೊಲ್ಲುವ ಹಾಗೂ ದೇಶದ ಅಖಂಡತೆಗೆ ಸಾವಲು ಎಸೆಯುವ ಮುಸ್ಲಿಂ ಗೋಕಟುಕರ ಜೊತೆ ನಾವು ವ್ಯವಹರಿಸುವುದಿಲ್ಲ ಹಾಗೂ ಅವರು ವ್ಯಾಪಾರ ಮಾಡಲು ಬಿಡುವುದಿಲ್ಲ ಎಂದು ಊರಿನ ಮುಂದೆ ಬೋರ್ಡ್ ಹಾಕಿದ್ದಾರೆ.

 

ಚಿಕ್ಕಮಾಗರವಳ್ಳಿ, ದೊಡ್ಡಮಾಗರವಳ್ಳಿ, ದೋಣಗೂಡಿಗೆ, ಸಾರಳ್ಳಿ ಹಾಗೂ ಹಳಿಯೂರು ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳೆಲ್ಲಾ ಸೇರಿ ಈ ಜಾತ್ರೆ ನಡೆಸುತ್ತಿದ್ದು, ಈವರಗೆ ಮುಸ್ಲಿಮರು ಇಲ್ಲಿ ವ್ಯಾಪಾರ-ವಹಿವಾಟು ನಡೆಸುತ್ತಿದ್ದರು. ಈ ಬಾರಿ ಈ ಜಾತ್ರೆಗೆ ಮುಸ್ಲಿಮರಿಗೆ ಅವಕಾಶವಿಲ್ಲದಂತಾಗಿದೆ. ಪ್ರತಿ ವರ್ಷ ಈ ಜಾತ್ರೆಯಲ್ಲಿ ಹತ್ತಾರು ಮುಸ್ಲಿಮರು ವಿವಿಧ ರೀತಿಯ ಅಂಗಡಿ ಹಾಕಿ ವ್ಯಾಪಾರ ವಹಿವಾಟು ನಡೆಸುತ್ತಿದ್ದರು. ಆದರೆ, ಈ ಬಾರಿ ಹಿಜಬ್ ವಿವಾದಕ್ಕೆ ಹೈಕೋರ್ಟ್ ನೀಡಿದ ತೀರ್ಪನ್ನ ಗೌರವಿಸದ ಹಿನ್ನೆಲೆ ಜಾತ್ರೆಯಲ್ಲಿ ಮುಸ್ಲಿಮರು ವ್ಯಾಪಾರ-ವಹಿವಾಟು ನಡೆಸದಂತಾಗಿದೆ.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!