May 8, 2024

MALNAD TV

HEART OF COFFEE CITY

ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹ:ಕೊರೊನಾ ವಾರಿಯರ್ಸ್‍ಗಳಿಂದ ಪ್ರತಿಭಟನೆ

1 min read

 

ಚಿಕ್ಕಮಗಳೂರು: ಕೊರೊನಾ ವಾರಿಯರ್ಸ್‍ಗಳನ್ನು ಸೇವೆಯಲ್ಲಿ ಮುಂದುವರೆಸಬೇಕೆಂದು ಒತ್ತಾಯಿಸಿ ಸೋಮವಾರ ನಗರದಲ್ಲಿ ಪ್ರತಿಭಟಿಸಿದರು.
ಕೊರೊನಾ ಸೋಂಕು ಉಲ್ಬಣಿಸಿದ ಸಂದರ್ಭದಲ್ಲಿ ಸೋಂಕನ್ನು ಹತೋಟಿಗೆ ತರಲು ರಾಜ್ಯ ಸರ್ಕಾರ 6 ತಿಂಗಳಿಗೆ ಕೊರೊನಾವಾರಿಯರ್ಸ್‍ಗಳನ್ನು ನೇಮಿಸಿಕೊಂಡಿದ್ದು, ಇದೀಗ ಸೇವೆಯಿಂದ ಬಿಡುಗಡೆಗೊಳಿಸಲು ಮುಂದಾಗಿರುವುದನ್ನು ವಿರೋಧಿಸಿ ಆಜಾದ್‍ವೃತ್ತದಲ್ಲಿ ಧರಣಿ ನಡೆಸಿದರು.ನರ್ಸಿಂಗ್ ಅಧಿಕಾರಿಗಳು, ಪ್ರಯೋಗಾಲಯ ತಂತ್ರಜ್ಞರು, ಡಿ.ದರ್ಜೆ ನೌಕರರನ್ನು ಖಾಸಗಿ ಏಜೆನ್ಸಿಗಳ ಮೂಲಕ ನೇಮಿಸಿಕೊಂಡಿದ್ದು, 1 ವರ್ಷಗಳ ಕಾಲ ದುಡಿಸಿಕೊಂಡಿದ್ದು, ಈಗ ಏಕಾಏಕಿ ಸೇವೆಯಿಂದ ಬಿಡುಗಡೆಗೊಳಿಸಿದರೆ ನಮ್ಮನ್ನೆ ನಂಬಿಕೊಂಡಿರುವ ಕುಟುಂಬ ಬೀದಿಗೆ ಬೀಳಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಜೀವದ ಹಂಗನ್ನು ತೊರೆದು ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಿದ್ದು, ಹಲವರು ಕುಟುಂಬದವರನ್ನು ಕಳೆದುಕೊಂಡಿದ್ದರೂ ಕರ್ತವ್ಯ ನಿರ್ವಹಿಸಿದ್ದಾರೆ. ನಮ್ಮನ್ನೆಲ್ಲ ಯಾವುದೇ ಯೋಜನೆಯಡಿ ಮುಂದುವರೆಸಿಬೇಕೆಂದು ಕೋರಿದ್ದಾರೆ.ಈ ಜಿಲ್ಲೆಯಲ್ಲಿ ಹೊಸದಾಗಿ ಆರಂಭವಾಗುತ್ತಿರುವ ವೈದ್ಯಕೀಯ ಕಾಲೇಜಿನಲ್ಲಿ ಕೊರೊನಾ ವಾರಿಯರ್ಸ್‍ಗಳಿಗೆ ಮೊದಲಾದ್ಯತೆ ನೀಡಬೇಕೆಂದು ಮನವಿ ಮಾಡಿದ್ದಾರೆ. ಶಶಿ,ಶರತ್ ನೇತೃತ್ವದಲ್ಲಿ ಧರಣಿ ನಡೆಸಲಾಯಿತು

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!