ಕೆಂಚರಾಯ ಸ್ವಾಮಿ ದೇಗುಲ ನಿರ್ಮಾಣಕ್ಕೆ ಚಾಲನೆ
1 min read
ಚಿಕ್ಕಮಗಳೂರು: ಮೂಡಿಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಳಿಹಳ್ಳ ಗ್ರಾ.ಪಂ ವ್ಯಾಪ್ತಿಯ ಉಳುವಾಗಿಲು ಗ್ರಾಮದಲ್ಲಿ ರೂ. 5 ಲಕ್ಷ ಅನುದಾನದಲ್ಲಿ ನಿರ್ಮಾಣಗೊಳ್ಳುತ್ತಿರುವ ಶ್ರೀ ಕೆಂಚರಾಯ ಸ್ವಾಮಿ ದೇವಾಲಯ ಕಾಮಗಾರಿಗೆ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಗುದ್ದಲಿಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು ಚುನಾಯಿತ ಪ್ರತಿನಿಧಿಯಾಗಿ ಯಾವುದೇ ಪಂಚಾಯಿತಿಗೂ ತಾರತಮ್ಯ ಮಾಡದೆ ಸಮಾನ ಅನುದಾನ ಹಂಚಿಕೆ ಮಾಡುವ ಮೂಲಕ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಉಳುವಾಗಿಲು ಹಾಗೂ ಚೆನ್ನಗೊಂಡನಹಳ್ಳಿ ಕ್ಷೇತ್ರದ ಅಂಚಿನಲ್ಲಿರುವ ಗ್ರಾಮಗಳಾಗಿದ್ದು ಅಭಿವೃದ್ಧಿ ಕುಂಠಿತವಾಗಿದೆ. ಆದರೆ ನನ್ನ ಅವಧಿಯಲ್ಲಿ ಗ್ರಾಮಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿದ್ದೇನೆ, ಉಳುವಾಗಿಲು ಗ್ರಾಮದಲ್ಲಿ ನಿರ್ಮಾಣಗೊಳ್ಳುತ್ತಿರುವ ಶ್ರೀ ಕೆಂಚರಾಯ ಸ್ವಾಮಿ ದೇಗುಲ 5 ಲಕ್ಷ ರೂ ಅನುದಾನ ಬಿಡುಗಡೆಗೊಳಿಸಿರುವುದಾಗಿ ತಿಳಿಸಿದರು.ರಾಜ್ಯದಲ್ಲಿ ಬಿಜೆಪಿ ಸರ್ಕಾರ ಕೋವಿಡ್ ತುರ್ತು ಸಂದರ್ಭದಲ್ಲಿಯೂ ಕ್ಷೇತ್ರಗಳ ಅಭಿವೃದ್ಧಿಗೆ ಆದ್ಯತೆ ನೀಡಿದೆ. ಆ ನಿಟ್ಟಿನಲ್ಲಿ ಗ್ರಾಮಕ್ಕೆ ದೇಗುಲಕ್ಕೆ ಅಗತ್ಯ ಅನುದಾನ ಬಿಡುಗಡೆಮಾಡಿದ್ದು ಗುಣಮಟ್ಟದೊಂದಿಗೆ ಉತ್ತಮ ಶೈಲಿಯಲ್ಲಿ ದೇವಾಲಯ ನಿರ್ಮಾಣ ಮಾಡುವಂತೆ ಗ್ರಾಮಸ್ಥರಿಗೆ ಸಲಹೆ ನೀಡಿದರು.
ಗ್ರಾಮದಲ್ಲಿ ಮುಖ್ಯವಾಗಿ ಸಮುದಾಯ ಭವನ ನಿರ್ಮಾಣ ಮಾಡಿಕೊಡುವಂತೆ ಗ್ರಾಮಸ್ಥರು ಸಾಕಷ್ಟು ಬಾರಿ ಮನವಿ ಮಾಡಿದ್ದಾರೆ, ಅದನ್ನು ಗಮನದಲ್ಲಿರಿಸಿಕೊಂಡು ಈ ಬಾರಿಯಲ್ಲಿ 30 ಲಕ್ಷ ರೂ ಅನುದಾನ ಬಿಡುಗಡೆಗೊಳಿಸುವ ಬಗ್ಗೆ ಭರವಸೆ ನೀಡಿದರು. ಕ್ಷೇತ್ರದಲ್ಲಿ 150 ಕೋಟಿ ರೂ ಅನುದಾನ ಬಿಡುಗಡೆಗೊಂಡಿದ್ದು ಎಲ್ಲಾ ಗ್ರಾಮಗಳಲ್ಲಿ ಗುಣಮಟ್ಟದ ಸಿಸಿ ರಸ್ತೆ ನಿರ್ಮಾಣ, ಸಮುದಾಯ ಭವನ ಸೇರಿದಂತೆ ಅಗತ್ಯ ಮೂಲಸೌಕರ್ಯಕ್ಕೆ ಅನುದಾನವನ್ನು ವಿನಿಯೋಗಿಸಲಾಗುತ್ತಿದೆ ಎಂದರು.ರಾಜ್ಯದಲ್ಲಿ ಬಿಜೆಪಿ ಸರ್ಕಾರ ರೈತರ ಹಿತಕಾಯಲು 10 ಹೆಚ್ಪಿ ವರೆಗಿನ ಮೋಟಾರ್ ಉಚಿತವಾಗಿ ವಿದ್ಯುತ್ ಪೂರೈಕೆ ಮಾಡಲಿದೆ, ಅಲ್ಲದೇ ವೃದ್ಧಾಫ್ಯರಿಗೆ ವೇತನ ಹೆಚ್ಚಳ ಮಾಡಲಾಗಿದೆ ಅಭಿವೃದ್ಧಿ ನಿಟ್ಟಿನಲ್ಲಿ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗ್ರಾಮಪಂಚಾಯಿತಿ ಉಪಾಧ್ಯಕ್ಷ ವೆಂಕಟೇಶ್, ಸದಸ್ಯರಾದ ಅರುಣ್ಕುಮಾರ್, ಸುಧಾ, ಶಾಂತಾ, ಸುರೇಶ್, ಸದಾಶಿವಪ್ಪ, ಬಿಜೆಪಿ ಮುಖಂಡರಾದ ಕಾಂಚಾನ್, ಚೇತನ್, ಗಿರೀಶ್, ದೇವರಾಜ್, ಗ್ರಾಮಸ್ಥರಾದ ಮೈಲಿಮನೆ ಪೂರ್ಣೇಶ್, ಜೆ.ವಿ.ಅಶೋಕ್, ನಾಗೇಶ್, ಅರುಣ್, ಬೈಗೂರು ನಾಗೇಶ್,ಕೃಷ್ಣಮೂರ್ತಿ, ಯು.ಪಿ.ಮನುಕುಮಾರ್, ಪ್ರೇಮ್ಕುಮಾರ್, ಗೌತಮ್ ಹರೀಶ್ ಗುತ್ತಿಗೆದಾರರಾದ ಹುಣಸೇಮಕ್ಕಿ ಅನಿಲ್ಕುಮಾರ್, ಸೇರಿದಂತೆ ಮತ್ತಿತರರು ಇದ್ದರು.
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g