May 20, 2024

MALNAD TV

HEART OF COFFEE CITY

ಬಸವನಹಳ್ಳಿ ಬಾಕ್ಸ್ ಚರಂಡಿ ನಿರ್ಮಾಣಕ್ಕೆ ಚಾಲನೆ

1 min read

 

ಚಿಕ್ಕಮಗಳೂರು: ನಗರದ ಬಸವನಹಳ್ಳಿ ವಾರ್ಡ್‍ನಲ್ಲಿ ಬಾಕ್ಸ್ ಚರಂಡಿ ನಿರ್ಮಾಣ ಕಾಮಗಾರಿಗೆ ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಗುರುವಾರ ಚಾಲನೆ ನೀಡಿದರು.
ನಗರವನ್ನು ಸ್ವಚ್ಚ ಹಾಗೂ ಸುಂದರವಾಗಿಸುವ ನಿರ್ಣಯವನ್ನು ನಗರಸಭೆಯಿಂದ ಕೈಗೊಳ್ಳಲಾಗಿದ್ದು, ಆ ನಿಟ್ಟಿನಲ್ಲಿ ಎಲ್ಲಾ ವಾರ್ಡ್‍ಗಳಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಬಸವನಹಳ್ಳಿ ವಾರ್ಡ್ ತುಂಬಾ ಹಳೆಯದಾಗಿದ್ದು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಸಾಕಷ್ಟು ರೂಪುರೇಷೆಗಳನ್ನು ಸಿದ್ದಪಡಿಸಲಾಗಿದೆ ಎಂದು ಹೇಳಿದರು.

ನಗರಸಭೆಯ ಅನುದಾನದಲ್ಲಿ 50 ಮೀಟರ್ ಬಾಕ್ಸ್ ಚರಂಡಿ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಚುನಾಯಿತ ಪ್ರತಿನಿಧಿಯಾಗಿ ಆಯ್ಕೆಯಾದ ಬಳಿಕ ನಗರಸಭಾ ವ್ಯಾಪ್ತಿಯ ಎಲ್ಲಾ ವಾರ್ಡ್‍ಗಳಿಗೂ ಸ್ವಚ್ಚತಾ ಕಾರ್ಯಕ್ಕೆ ವಿಶೇಷ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.ನಗರಸಭೆ ಅನುದಾನದಲ್ಲಿ ಯಾವುದೇ ತಾರತಮ್ಯ ಮಾಡದೇ ಪಕ್ಷ ಭೇದ ಮರೆತು ಎಲ್ಲಾ ವಾರ್ಡ್‍ಗಳಲ್ಲೂ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುತ್ತಿದೆ. ಬಸವನಹಳ್ಳಿಯಲ್ಲಿ ಒಳಚರಂಡಿ ಸಂಪರ್ಕ ಹಳೆಯದಾಗಿದ್ದು, ಅಮೃತ್ ಯೋಜನೆ ಕಾಮಗಾರಿ, ಬಾಕ್ಸ್ ಚರಂಡಿ ಕಾಮಗಾರಿ ಪೂರ್ಣಗೊಂಡ ಬಳಿಕ ಯುಜಿಡಿ ಸರಿಪಡಿಸಿ ರಸ್ತೆ ಡಾಂಬರೀಕರಣ ಮಾಡಲಾಗುವುದು ಎಂದರು.

ಅನಿತಾ ನಾಗೇಂದ್ರ ಮಾತನಾಡಿ ಬಸವನಹಳ್ಳಿ ಬಡಾವಣೆ ತುಂಬಾ ಹಳೆಯದಾಗಿದ್ದು, ರಸ್ತೆಗಳು ಕಿರಿದಾಗಿದೆ ರಸ್ತೆ ಬದಿಯಲ್ಲಿಯೇ ವಾಹನಗಳ ನಿಲುಗಡೆಯಿಂದಾಗಿ ಸಂಚಾರಕ್ಕೆ ತೀವ್ರ ಅಡಚಣೆಯಾಗುತ್ತಿದ್ದು, ಬಗ್ಗೆ ನಗರಸಭೆ ಗಮನಹರಿಸಬೇಕೆಂದು ಮನವಿ ಮಾಡಿದರು.
ವಾರ್ಡ್‍ನಲ್ಲಿ ಒಳಚರಂಡಿಯ ಹಳೆ ಸಂಪರ್ಕವಿದು,್ದ ಹೊಸದಾಗಿ ಸಂಪರ್ಕ ಕಲ್ಪಿಸಲು ಕ್ರಮವಹಿಸಬೇಕು. ನಗರದಲ್ಲಿ ಹೊಸದಾಗಿ ಮನೆ ನಿರ್ಮಾಣ ಮಾಡುವವರಿಗೆ ಪಾರ್ಕಿಂಗ್ ಇರುವ ಬಗ್ಗೆ ಮಾಹಿತಿ ಪಡೆದು ಅನುಮತಿ ನೀಡುವಂತೆ ಕೇಳಿಕೊಂಡರು. ಹರೀಶ್, ವಿನಯ್, ಸುನೀತಾ, ಅಶ್ವಿನಿ, ಅನಿತಾ ಇದ್ದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!