May 20, 2024

MALNAD TV

HEART OF COFFEE CITY

ಬೆಲೆ ಏರಿಕೆಗೆ ಸಿಪಿಐ ಖಂಡನೆ: ಹಗ್ಗಕಟ್ಟಿ ಬೈಕ್ ಎಳೆದು ಪ್ರತಿಭಟನೆ

1 min read

 

ಚಿಕ್ಕಮಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಭಾರತೀಯ ಕಮ್ಯೂನಿಸ್ಟ್ ಪಕ್ಷದ ಮುಖಂಡರು ನಗರzಲ್ಲಿ ಗ್ಯಾಸ್ ಸಿಲಿಂಡರ್ ಅನ್ನು ತಳ್ಳುಗಾಡಿ ಮೇಲಿಟ್ಟು ಹೂವಿನಹಾರ ಹಾಕಿ, ಬೈಕ್‍ಗಳಿಗೆ ಹಗ್ಗ ಕಟ್ಟಿ ಎಳೆಯುವ ಮೂಲಕ ವಿಭಿನ್ನವಾಗಿ ಪ್ರತಿಭಟಿಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ನಗರದ ಭಾರತೀಯ ಕಮ್ಯೂನಿಸ್ಟ್ ಪಕ್ಷದ ಕಚೇರಿಯಿಂದ ಆಜಾದ್ ಪಾರ್ಕ್ ವೃತ್ತದವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ನಂತರ ಆಜಾದ್ ಪಾರ್ಕ್ ವೃತ್ತದಲ್ಲಿ ಸಮಾವೇಶಗೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಭಾರತೀಯ ಕಮ್ಯೂನಿಸ್ಟ್ ಪಕ್ಷದ ಮುಖಂಡರಾದ ರಾಧಾ ಸುಂದರೇಶ್ ಮಾತನಾಡಿ, ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ರಸಗೊಬ್ಬರ ಬೆಲೆಏರಿಕೆಯಿಂದ ಜನರ ಬದುಕು ಬೀದಿಗೆ ಬಿದ್ದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜನರು ಸಂಕಷ್ಟ ಎದುರಿಸುತ್ತಿದ್ದು ಈ ಸರ್ಕಾರವನ್ನು ಮುಂಬರುವ ಚುನಾವಣೆಗಳಲ್ಲಿ ಕಿತ್ತು ಹಾಕಬೇ ಕೆಂದು ಮನವಿ ಮಾಡಿದರು.ಮುಖಂಡ ರಘು ಮಾತನಾಡಿ, ಹಂತ ಹಂತವಾಗಿ ಅಗತ್ಯವಸ್ತುಗಳ ಬೆಲೆಏರಿಕೆ ಮಾಡ ಲಾಗುತ್ತಿದೆ. ಈ ಹಿಂದೆ ಜನಸಾಮಾನ್ಯರು ಒಂದೂವರೆ ಲಕ್ಷ ರೂ. ನಲ್ಲಿ ಮನೆ ಕಟ್ಟಿ ಕೊಳ್ಳುತ್ತಿದ್ದರು. ಆದರೆ ಇಂದು ಬೆಲೆಏರಿಕೆಯಿಂದ ಸಾಧ್ಯವಾಗುತ್ತಿಲ್ಲ ಎಂದರು.

ಜಾರ್ಜ್ ಆಸ್ಟಿನ್ ಮಾತನಾಡಿ, ಮೋದಿ ಸರ್ಕಾರದಲ್ಲಿ ಅಗತ್ಯವಸ್ತುಗಳ ಬೆಲೆಏರಿಕೆ ಯಿಂದ ಜನಸಾಮಾನ್ಯರು ನೆಮ್ಮದಿಯಿಂದ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಬೆಲೆಏರಿಕೆ ನಿಯಂತ್ರಿಸಲು ವಿಫಲವಾದ ಬಿಜೆಪಿ ಸರ್ಕಾರ ದೇಶ ಮತ್ತು ರಾಜ್ಯದಲ್ಲಿ ಕೋಮುದಳ್ಳೂರಿ ಎಬ್ಬಿಸಿ ಜನರ ದಿಕ್ಕು ತಪ್ಪಿಸಲಾಗುತ್ತಿದೆ. ಬೆಲೆಏರಿಕೆಗೆ ಪಾರಿತೋಷಕ ನೀಡುವುದಾದರೇ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಸವರಾ ಜ್ ಬೊಮ್ಮಾಯಿ ಅವರಿಗೆ ನೀಡಬೇಕು ಎಂದು ಲೇವಡಿ ಮಾಡಿದರು.

ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್  ಮಾಡಿ,

https://youtube.com/channel/UCbV1djwI3wZ-HVhKoGSaq1g

 

ನಿಮ್ಮ ಮಲ್ನಾಡ್ ಟಿವಿ ಇದೀಗ ಆಪ್ ನಲ್ಲಿ ಲಭ್ಯ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ ಆಪ್ ಡೌನ್ಲೋಡ್ ಮಾಡಿಕೊಳ್ಳಿ

Leave a Reply

Your email address will not be published. Required fields are marked *

You may have missed

error: Content is protected !!