ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಹೆಡ್ ಕಾನ್ಸ್ ಟೇಬಲ್ ಸಾವು
1 min readಕೊಟ್ಟಿಗೆಹಾರ:ಕರ್ತವ್ಯ ನಿರ್ವಹಿಸುತ್ತಿದ್ದಾಗಲೇ ಹೆಡ್ ಕಾನ್ಸ್ ಟೇಬಲ್ವೊಬ್ಬರು ಮೃತಪಟ್ಟ ಘಟನೆ ಬಣಕಲ್ ಪೊಲೀಸ್ ಠಾಣೆಯಲ್ಲಿ ನಡೆದಿದೆ.ಬಣಕಲ್ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ಬಿ. ಪರಮೇಶ್ವರಪ್ಪ (51) ಎಂಬುವವರು ಅಸ್ವಸ್ಥಗೊಂಡಿದ್ದು ಕೂಡಲೇ ಮೂಡಿಗೆರೆ ಎಂಜಿಎಂ ಆಸ್ಪತ್ರೆಗೆ ಕರೆದ್ಯೊಯಲಾಗಿದೆ. ಆಸ್ಪತ್ರೆಯಲ್ಲಿ ವೈದ್ಯರು ಪರಮೇಶ್ ಅವರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ಕೆ.ಬಿ. ಪರಮೇಶ್ವರಪ್ಪ ಅವರು ಚಿಕ್ಕಮಗಳೂರು ತಾಲ್ಲೂಕು ಲಕ್ಯಾ ಹೋಬಳಿ ಕಣಿವೆ ಹಳ್ಳಿ ಮೂಲದವರಾಗಿದ್ದು ಕಳೆದ ಐದು ವರ್ಷಗಳಿಂದ ಬಣಕಲ್ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಕೆ.ಬಿ. ಪರಮೇಶ್ವರಪ್ಪ ಅವರನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಕಣಿವೆ ಹಳ್ಳಿಯ ಖಾಸಗಿ ಜಮೀನಿನಲ್ಲಿ ಸೋಮವಾರ ಅಂತ್ಯಸಂಸ್ಕಾರ ನೆರವೇರಿಸಲಾಯಿತು.
ಮೂಡಿಗೆರೆ ವೃತ್ತ ನಿರೀಕ್ಷಕ ಸೋಮಶೇಖರ್, ಬಣಕಲ್ ಠಾಣೆ ಪಿಎಸ್ಐ ಗಾಯತ್ರಿ, ಬಾಳೂರು ಠಾಣೆ ಪಿಎಸ್ಐ ರೇಣುಕಾ, ಕೊಪ್ಪ ಠಾಣೆಯ ಪಿಎಸ್ಐ ಶ್ರೀನಾಥ್ ರೆಡ್ಡಿ, ಕಳಸ ಠಾಣೆ ಎಎಸ್ಐ ಮೋಹನ್ಕುಮಾರ್ ಹಾಗೂ ಪೊಲೀಸ್ ಸಿಬ್ಬಂದಿಗಳು ಮೃತರ ಅಂತಿಮ ದರ್ಶನ ಪಡೆದರು
ನಿಮ್ಮ ಎಲ್ಲಾ ಸ್ಥಳಿಯ ಸುದ್ದಿಗಳಿಗಾಗಿ ಮಲ್ನಾಡ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿಕೊಳ್ಳಲು ಈ ಲಿಂಕನ್ ಪ್ರೆಸ್ ಮಾಡಿ, ಲೈಕ್ ಮಾಡಿ, ಶೇರ್ ಮಾಡಿ,
https://youtube.com/channel/UCbV1djwI3wZ-HVhKoGSaq1g